Advertisement

ದಾವಣಗೆರೆ: ವರ್ಷದಿಂದ ಸಂಬಳ ಸಿಕ್ಕಿಲ್ಲ ಎಂದು ಬೇಸತ್ತು ಸಹಕಾರಿ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

02:54 PM Jun 13, 2021 | Team Udayavani |

ದಾವಣಗೆರೆ: ತಾಲೂಕಿನ ಶ್ಯಾಗಲೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಿ.ಎನ್. ಚಂದ್ರಪ್ಪ ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

Advertisement

ಕಳೆದ ಒಂದು ವರ್ಷದಿಂದ ಅವರಿಗೆ ಬರಬೇಕಾದ ಸಂಬಳ ಕೊಟ್ಟಿರಲಿಲ್ಲ. ಸಹಕಾರ ಸಂಘಗಳ ಕಚೇರಿ ಸಿಬ್ಬಂದಿಯೊಬ್ಬರು ಸಂಬಳ ಮಂಜೂರು ಮಾಡಲು ಒಂದು ಲಕ್ಷ ರೂಪಾಯಿ ಲಂಚ ಕೇಳಿದ್ದರು. ಹೇಗೋ ಹಣ ಹೊಂದಿಸಿ  20 ಸಾವಿರ ಕೊಟ್ಟರೂ ಸಂಬಳ ಕೊಡದೆ ಹಣ ದುರ್ಬಳಕೆ   ಆರೋಪದ ಮೇಲೆ ಕೆಲವರ ಚಿತಾವಣೆಯಿಂದ ನನ್ನನ್ನು ಅಮಾನತ್ತು ಮಾಡಲಾಗಿದೆ. ಸಂಬಳವಿಲ್ಲದೆ ಸಂಸಾರ ನೆಡೆಸುವುದು ಕಷ್ಟವಾಗಿದ್ದು ಬೇರೆ ದಾರಿ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಾವಿಗೂ ಮುನ್ನ ಅವರು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಅಪ್ಪನ ಕನಸು ನನಸು ಮಾಡಿದ ರಕ್ಷಕ: ಚಂದನವನಕ್ಕೆ ಕಾಲಿಟ್ಟ ದಿ.ಬುಲೆಟ್ ಪ್ರಕಾಶ್ ಪುತ್ರ

ನಾನು ಸೊಸೈಟಿಯಲ್ಲಿ ಯಾವುದೇ ಹಣ ದುರುಪಯೋಗ ಮಾಡಿಲ್ಲ. ತಾನು ನಿರಪರಾಧಿ ಎಂದು ಪತ್ರದಲ್ಲಿ ಬರೆದು ಸಹಿ ಮಾಡಿದ್ದಾರೆ. ಹದಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next