Advertisement

ಕನ್ನಡದ ಮತ್ತೊಂದು ಗೀತೆಗೆ ಧ್ವನಿಯಾದ ಸಿದ್ ಶ್ರೀರಾಮ್

04:31 PM Feb 02, 2023 | Team Udayavani |

ಇ.ವಿ. ಗಣೇಶ್‌ ಬಾಬು ನಿರ್ದೇಶನದ “ಮಂಚ’ ಚಿತ್ರದ “ದೇಗುಲದಿ…’ ಎಂಬ ಲಿರಿಕಲ್‌ ಹಾಡು ಇದೀಗ ಯೂ-ಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. “ಜಗವೇ ನೀನು’ ಖ್ಯಾತಿಯ ಸಿದ್‌ ಶ್ರೀರಾಮ್‌ ಈ ಹಾಡಿಗೆ ಧ್ವನಿಯಾಗಿದ್ದು, “ಪುಷ್ಪ’ ಚಿತ್ರದ ಜನಪ್ರಿಯ ಗೀತೆ “ಶ್ರೀವಳ್ಳಿ’ ಹಾಡಿಗೆ ಕನ್ನಡ ಸಾಹಿತ್ಯ ಬರೆದಿದ್ದ ವರದರಾಜ ಚಿಕ್ಕಬಳ್ಳಾಪುರ, ಈ ಹಾಡಿಗೂ ಸಾಹಿತ್ಯ ರಚಿಸಿದ್ದಾರೆ.

Advertisement

“ಮಂಚ’ ಎಂಬ ಹೆಸರೇ ಹೇಳುವಂತೆ, ಈ ಚಿತ್ರವು ಒಂದು ಪ್ರತಿಷ್ಠಿತ ಕುಟುಂಬದ ಮೂರು ತಲೆಮಾರಿನವರು ಉಪಯೋಗಿಸಿದ ಒಂದು ಮಂಚದ ಸುತ್ತ ಸಾಗುತ್ತದೆ. ಜನ ಹೇಗೆ ತಮ್ಮ ಸಂಪ್ರದಾಯ ಮತ್ತು ಗುರುತುಗಳನ್ನು ಕ್ರಮೇಣ ಮರೆಯುತ್ತಿದ್ದಾರೆ ಎಂದು ಹೇಳುವ ಪ್ರಯತ್ನ ಮಾಡಿರುವ ಈ ಚಿತ್ರವು ಈಗಾಗಲೇ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಗೊಂಡು, ಕೆಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

“ಮಂಚ’ ಒಂದು ಪ್ಯಾನ್‌ ಇಂಡಿಯಾ ಚಿತ್ರವಾಗಿದ್ದು ತಮಿಳಿನಲ್ಲಿ ನಿರ್ಮಾಣಗೊಂಡು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಿಗೆ ಡಬ್‌ ಆಗಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಸದ್ಯ ಬಿಡುಗಡೆಯಾಗಿರುವ ಈ ಹಾಡನ್ನು ನಾಲ್ಕೂ ಭಾಷೆಗಳಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ “ಅಮೃತವರ್ಷಿಣಿ’ ಚಿತ್ರದ ಹಾಡುಗಳನ್ನು ಸಂಯೋಜಿಸಿದ್ದ ಸಂಗೀತ ನಿರ್ದೇಶಕ ದೇವ ಅವರ ಪುತ್ರ ಶ್ರೀಕಾಂತ್‌ ದೇವ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಇ.ವಿ. ಗಣೇಶ್‌ ಬಾಬು ಈ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸುವುದರ ಜತೆಗೆ ನಾಯಕನಾಗಿಯೂ ಕಾಣಿಸಿಕೊಂದ್ದಾರೆ.

ನಾಯಕಿಯಾಗಿ ಸೃಷ್ಟಿ ದಂಗೆ ಅಭಿನಯಿಸಿದ್ದು, ಮಿಕ್ಕಂತೆ ವಿದಾರ್ಥ್ (ಅತಿಥಿ ಪಾತ್ರ), ಮಾಸ್ಟರ್‌ ನಿಧೀಶ್‌, ಗೀತಾ ಕೈಲಾಸಂ, ಇಂದಿರಾ ಸೌಂರ್ದ ರಾಜನ್‌, ಸಂಪತ್‌ ರಾಮ್, ಸಮ್ಮಾಲರ್‌ ಅಣ್ಣಂ ಮುಂತಾದವರು ತಾರಾಬಳಗದಲ್ಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next