Advertisement

ಸಿದ್ದಗಂಗಾ ಶ್ರೀ ಆರೋಗ್ಯ ಕೊಂಚ ಏರುಪೇರು: ಆಸ್ಪತ್ರೆಗೆ ದಾಖಲು

11:07 AM Jun 21, 2018 | Team Udayavani |

ತುಮಕೂರು:ಸಿದ್ದಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶಿವಕುಮಾರ ಸ್ವಾಮಿಜಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು ಅವರನ್ನು ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 

Advertisement

ಶ್ರೀಗಳಿಗೆ ಒಟ್ಟು 8 ಸ್ಟಂಟ್‌ಗಳನ್ನು ಅಳವಡಿಸಲಾಗಿದ್ದು ಸಾಮಾನ್ಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಶ್ರೀಗಳು ಲವಲವಿಕೆಯಿಂದ ಇದ್ದಾರೆ ಎಂದು ಮಠದ ಕಿರಿಯ ಶ್ರೀಗಳು ತಿಳಿಸಿದ್ದಾರೆ. 

ಮುಂಜಾನೆ ಆಸ್ಪತ್ರೆಗೆ ಬಂದ ಶ್ರೀಗಳು ಕಾರು ಇಳಿದ ಬಳಿಕ ನಡೆದುಕೊಂಡೆ ಆಸ್ಪತ್ರೆ ಒಳಗೆ ತೆರಳಿದ್ದಾರೆ. 

ಶ್ರೀಗಳಿಗೆ ರಕ್ತ ಪರೀಕ್ಷೆ ನಡೆಸಿ ವರದಿ ಬಂದ ಬಳಿಕ ಮಠಕ್ಕೆ ಕರೆದೊಯ್ಯಲಾಗುವ ಬಗ್ಗೆ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. 

6 ಮಂದಿ ವೈದ್ಯರ ತಂಡ ಶ್ರೀಗಳ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. 

Advertisement

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next