Advertisement

ಸಿದ್ದೇಶ್ವರಶ್ರೀ ಚಿತಾಕಟ್ಟೆ ದರ್ಶನ ಪಡೆದ ಸಿದ್ಧಗಂಗಾಶ್ರೀ

02:59 PM Jan 06, 2023 | keerthan |

ವಿಜಯಪುರ: ನಗರದ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿದ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಮಠಾಧೀಶ ಸಿದ್ದಲಿಂಗ ಶ್ರೀಗಳು ಬಯಲಲ್ಲಿ ಬಯಲಾಗಿದ್ದ ಸಿದ್ಧೇಶ್ವರ ಶ್ರೀಗಳ ಚಿತಾಕಟ್ಟೆ ದರ್ಶನ ಪಡೆದರು.

Advertisement

ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆ ಸಂದರ್ಭದಲ್ಲಿ ಕಾರಣಾಂತರದಿಂದ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಶುಕ್ರವಾರ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಸಿದ್ಧಲಿಂಗ ಶ್ರೀಗಳು, ಸಿದ್ದೇಶ್ವರ ಶ್ರೀಗಳ ಚಿತಾಕಟ್ಟೆ ದರ್ಶನ ಮಾಡಿದರು.

ಆಧ್ಯಾತ್ಮ ಲೋಕದಲ್ಲಿ ಸಿದ್ದೇಶ್ವರ ಶ್ರೀಗಳು ಭಾಸ್ಕರನಿದ್ದಂತೆ. ಆಧ್ಯಾತ್ಮ ಪ್ರವಚನದ ಮೂಲಕ ಮನಕುಲಕ್ಕೆ ಮಾದರಿಯಾಗಿದ್ದರು ಎಂದರು.

ಇದನ್ನೂ ಓದಿ:ಭ್ರಷ್ಟಾಚಾರ ರಕ್ತ ಬೀಜಾಸುರರನ್ನು ಹುಟ್ಟಿಸಿದ್ದೆ ಕಾಂಗ್ರೆಸ್ : ಪ್ರಹ್ಲಾದ್ ಜೋಶಿ

ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಸಿದ್ಧಲಿಂಗ ಶ್ರೀಗಳು, ಅನಿವಾರ್ಯ ಕಾರ್ಯಗಳಿಂದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಆಗಿರಲಿಲ್ಲ. ಹೀಗಾಗಿ ಇಂದು ಆಗಮಿಸಿ ಚಿತಾಕಟ್ಟೆ ದರ್ಶನ ಪಡೆದಿದ್ದೇವೆ. ಸಾಧ್ಯವಾದರೆ ಚಿತಾಭಸ್ಮ ವಿಸರ್ಜನಾ ಕಾರ್ಯಕ್ರಮದಲ್ಲೂ ಭಾಗವಹಿಸುತ್ತೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next