Advertisement

ಸಿದ್ಧಗಂಗಾ ಶ್ರೀ ಆಸ್ಪತ್ರೆಗೆ ದಾಖಲು

12:30 AM Jan 04, 2019 | |

ತುಮಕೂರು: ಸಿದ್ಧಗಂಗಾ ಮಠದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರನ್ನು ನಗರದ ಸಿದ್ಧಗಂಗಾ ಆಸ್ಪತ್ರೆಗೆ ರಾತ್ರಿ 8.15ರ ವೇಳೆಗೆ ದಾಖಲು ಮಾಡಲಾಗಿದೆ. 

Advertisement

ಶ್ರೀಗಳು ಮಠದಲ್ಲಿಯೇ ಇದ್ದರೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದ್ದು ಮತ್ತು ಶ್ರೀಗಳ ಆರೋಗ್ಯ ತಪಾಸಣೆ ಮಾಡಲು ಪರಿಕರಗಳ ತೊಂದರೆ ಉಂಟಾಗುತ್ತದೆ ಎಂಬ ಕಾರಣಕ್ಕಾಗಿ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. 

ಸಂಜೆ ಮಠಕ್ಕೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ದಿವ್ಯಾ ವಿ.ಗೋಪಿನಾಥ್‌ ಆಗಮಿಸಿ ಶ್ರೀಗಳನ್ನು ಅವರು ವಿಶ್ರಾಂತಿ ಪಡೆಯುತ್ತಿದ್ದ ಹಳೇ ಮಠದಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಭಕ್ತರು ಆತಂಕ ಪಡುವ ಅಗತ್ಯವಿಲ್ಲ, ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಯಲಿದೆ ಎಂದು ವೈದ್ಯರು ಹೇಳಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next