Advertisement

ಸಿದ್ದಗಂಗಾ ಶ್ರೀಗಳು ಮಠಕ್ಕೆ ಶಿಫ್ಟ್; ಶ್ರೀಮಠದ ಸುತ್ತ ಬಂದೋಬಸ್ತ್ 

03:49 AM Jan 16, 2019 | |

ತುಮಕೂರು: ಶ್ವಾಸಕೋಶದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಬುಧವಾರ ಮುಂಜಾನೆ ವೇಳೆ ಮಠಕ್ಕೆ ಕರೆದುಕೊಂಡು ಬರಲಾಗಿದೆ. ಆಸ್ಪತ್ರೆಯಲ್ಲಿ ನೀಡಲಾಗುತ್ತಿದ್ದ ಚಿಕಿತ್ಸೆಯನ್ನು ,ಮಠದಲ್ಲಿ ಮುಂದುವರಿಸುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. 

Advertisement

ಸ್ವಾಮೀಜಿಗಳನ್ನು ಮಠಕ್ಕೆ ಕರೆತಂದ ಹಿನ್ನಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶ್ರೀಗಳ ಭಕ್ತಾದಿಗಳು ಮಠದ ಬಳಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬ್ಯಾರಿಕೇಡ್ ಗಳನ್ನು ಅಳವಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮಠಕ್ಕೆ ಭದ್ರತೆ ವಹಿಸಿದ್ದಾರೆ. 

ಯದುವೀರ್ ಭೇಟಿ: ಬುಧವಾರ ಮುಂಜಾನೆ ಮೈಸೂರಿನ ಯದುವೀರ್ ಒಡೆಯರ್, ಸ್ವಾಮೀಜಿಯವರನ್ನು ಭೇಟಿ ಮಾಡಿದ್ದಾರೆ. ನಂತರ ಮಾತನಾಡಿದ ಯದುವೀರ್, ಶ್ರೀಗಳು ವಿಶ್ರಾಂತಿಯಲ್ಲಿ ಇದ್ದರು. ಹಾಗಾಗಿ ಮಾತನಾಡಲು ಸಾಧ್ಯವಾಗಿಲ್ಲ. ಆಶೀರ್ವಾದ ಪಡೆದುಕೊಂಡು ಬಂದೆ ಎಂದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next