Advertisement

ಸಿದ್ಧಗಂಗಾ ಶ್ರೀ ಆಶೀರ್ವಾದ ಪಡೆದ ಸಿಎಂ

11:39 PM Aug 21, 2019 | Lakshmi GovindaRaj |

ತುಮಕೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಗರದ ಶ್ರೀ ಸಿದ್ಧಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿ, ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ಬಳಿಕ, ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಇದೇ ವೇಳೆ, ರಾಜ್ಯದ ನೆರೆ ಸಂತ್ರಸ್ತರ ಪರಿಹಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದಿಂದ 50 ಲಕ್ಷ ರೂ.ಗಳ ಚೆಕ್‌ನ್ನು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಮುಖ್ಯಮಂತ್ರಿಗೆ ಹಸ್ತಾಂತರಿಸಿದರು.

Advertisement

ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, “ಲಿಂ.ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದದಿಂದ ಮತ್ತೆ ಮುಖ್ಯಮಂತ್ರಿಯಾಗಿದ್ದೇನೆ. ಅವರ ಹಾರೈಕೆ ಎಂದಿಗೂ ನನ್ನ ಮೇಲಿರುತ್ತದೆ’ ಎಂದರು. ಉಮೇಶ್‌ ಕತ್ತಿಯವರು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತನಾಡಿರುವ ವಿಚಾರದಲ್ಲಿ ಹುರುಳಿಲ್ಲ.

ಉಮೇಶ್‌ ಕತ್ತಿ ಜೊತೆ ನಿನ್ನೆ ಒಂದು ಗಂಟೆ ನಾನು ಮತ್ತು ಬೊಮ್ಮಾಯಿ ಮಾತನಾಡಿದ್ದೇವೆ. ಅವರಿಗೆ ಅವಕಾಶ ಸಿಗಬೇಕು ಎನ್ನುವುದು ನಮ್ಮ ಮನಸ್ಸಿನಲ್ಲಿ ಇದೆ. ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು. ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಶಾಸಕ ರೇಣುಕಾಚಾರ್ಯ ಗರಂ ಆಗಿರುವ ಕುರಿತು ಪ್ರತಿಕ್ರಿಯಿಸಿ, ಅವರನ್ನು ಕರೆದು ಮಾತನಾಡಿದ್ಧೇನೆ. ಪಕ್ಷದಲ್ಲಿರುವ ಅಸಮಾಧಾನ ಬಗೆಹರಿಯುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next