Advertisement

ಮತ ಎಣಿಕೆ ಸಮಯದಲ್ಲಿ ಗಲಾಟೆ : ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರ ಪೊಲೀಸರ ವಶ!

10:17 AM May 02, 2021 | Team Udayavani |

ರಾಯಚೂರು: ಮತ ಎಣಿಕೆ ಮಾಹಿತಿ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದು ಕೋಣೆಯಲ್ಲಿ ಕೂರಿಸಿರುವ ಘನಟೆ ನಡೆದಿದೆ.

Advertisement

ಬಸನಗೌಡ ತುರ್ವಿಹಾಳ ಸಹೋದರ  ಸಿದ್ದನಗೌಡ ತುರ್ವಿಹಾಳ ಕರ್ತವ್ಯನಿರತ ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಡಿಸಿ ಆರ್.ವೆಂಕಟೇಶಕುಮಾರ್ ಮಧ್ಯಪ್ರವೇಶಿಸಿ ಅವರನ್ನು ವಶಕ್ಕೆ ಪಡೆಯಿರಿ ಎಂದು ಸೂಚಿಸಿದರು. ಬಳಿಕ ಪೊಲೀಸರು ಅವರನ್ನು ನ್ಯೂಸ್ ರೂಂ ಕರೆದಯೊಯ್ದು ಕೂಡಿಸಿದರು. ಈ ವೇಳೆ ಮಾತನಾಡಿದ ಸಿದ್ದನಗೌಡ, ಅಧಿಕಾರಿಗಳಿಗೆ ಕೇಳಿದರೆ ಸರಿಯಾದ ಮಾಹಿತಿಯನ್ನು ಕೊಡುತ್ತಿಲ್ಲ ಎಂದು ದೂರಿದರು.

ಇನ್ನು ರಾಜ್ಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾದ ರಾಜ್ಯ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮಸ್ಕಿ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಮುನ್ನಡೆ ಕಾಯ್ದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next