Advertisement

ಸಿದ್ದನಕೊಳ್ಳ ಶ್ರೀಗಳಿಗೆ ಪತ್ನಿ ವಿಯೋಗ: ಗಣ್ಯರ ಸಂತಾಪ

09:36 AM Jul 20, 2022 | Team Udayavani |

ಅಮೀನಗಡ: ಸುಕ್ಷೇತ್ರ ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಅವರ ಪತ್ನಿ ಮಾತೋಶ್ರೀ ರೇಖಾದೇವಿ  ಕಂಬಳಿ ಹಿರೇಮಠ (40) ಅವರು ಬುಧವಾರ ಬೆಳಿಗ್ಗೆ ಹುಬ್ಬಳ್ಳಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿಧನರಾಗದ್ದಾರೆ.

Advertisement

ಮಾತೋಶ್ರೀ ಅವರು ಆನಾರೋಗ್ಯದಿಂದ ಬಳಲುತ್ತಿದ್ದು, ಹುಬ್ಬಳ್ಳಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಗದಗ ಜಿಲ್ಲೆಯ ಮಾರನಬಸರಿ ಗ್ರಾಮದಲ್ಲಿ ನೆರವೇರಲಿದೆ ಎಂದು ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಕರಾವಳಿಯಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ: ಜೋರು ಮಳೆ ಬಂದರೆ ತಾಸುಗಟ್ಟಲೆ ಕತ್ತಲು!

ಮೃತರು ಮಗಳು,ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಸಂತಾಪ: ಮಾತೋಶ್ರೀ ರೇಖಾದೇವಿ  ಕಂಬಳಿ ಹಿರೇಮಠ ನಿಧನಕ್ಕೆ ರಾಜಕೀಯ ಮುಖಂಡರು, ಹಿರಿಯ ಸಾಹಿತಿಗಳು, ವಿವಿಧ ಸಾಹಿತ್ಯ ಸಂಘಟನೆಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ ಡಾ.ವಿಜಯಾನಂದ ಕಾಶಪ್ಪನವರ, ಜಿಪಂ ಮಾಜಿ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ ಸೇರಿದಂತೆ ಇನ್ನಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next