Advertisement

Siddapura: ಜಾಗದೊಳಗೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು

07:17 PM Oct 21, 2024 | Team Udayavani |

ಸಿದ್ದಾಪುರ: ಅಂಪಾರು ಗ್ರಾಮದ ವಾಮನ ಸಾಧು ನಮ್ಮ ಜಾಗದ ಒಳಗೆ ಅಕ್ರಮವಾಗಿ ಪ್ರವೇಶಿಸಿ ಮರ ಕಡಿಯಲು ಮುಂದಾಗಿದ್ದರು.

Advertisement

ಇದನ್ನು ಅಕ್ಷೇಪಿಸಿದ್ದಕ್ಕೆ ಅವರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾಗಿ ರಾಜೇಶ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ವಾಮನ ಸಾಧು ಕಲ್ಲಿನಿಂದ ಹಣೆಗೆ ಹೊಡೆದಿದ್ದು, ಕಲ್ಲಿನ ಏಟಿನಿಂದ ಕೆಳಗೆ ಬಿದ್ದಾಗ ಆರೋಪಿ ದೊಣ್ಣೆಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದ. ತಾಯಿ ಯಶೋಧಾ ಅವರು ಬೊಬ್ಬೆ ಹಾಕಿದ್ದರಿಂದ‌ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ರಾಜೇಶ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ರಾಜೇಶ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next