Advertisement

Siddapura,ಇಲಿ ಪಾಷಾಣ ಸೇವಿಸಿ ಮಹಿಳೆ ಸಾವು

12:40 AM Jan 06, 2024 | Team Udayavani |

ಸಿದ್ದಾಪುರ: ಜಾಂಡೀಸ್‌ನಿಂದ ಬಳಲುತ್ತಿದ್ದ ಹಾಗೂ ಮದ್ಯ ವ್ಯಸನಿಯಾಗಿದ್ದ ಹೆಂಗವಳ್ಳಿ ಲಕ್ಷ್ಮೀ (40) ಅವರು ಖನ್ನತೆಗೆ ಒಳಗಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಗಂಭೀರ ಸ್ಥಿತಿಯಲ್ಲಿದ್ದ ಲಕ್ಷ್ಮೀ ಅವರಿಗೆ ಕುಂದಾಪುರ ಸರಕಾರಿ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಜ. 4ರಂದು ಕೊನೆಯುಸಿರೆಳೆದರು. ಈ ಬಗ್ಗೆ ಅವರ ಪುತ್ರ ಪ್ರದೀಪ್‌ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next