Advertisement

ಸಿದ್ದರಾಮಯ್ಯ ಸಲಹೆ ಪಡೆಯಲು ಸಿಎಂಗೆ ಸಲಹೆ 

07:10 AM May 26, 2018 | Team Udayavani |

ಬೆಂಗಳೂರು: ಬಜೆಟ್‌ ಮಂಡನೆ ಸೇರಿದಂತೆ ಸರ್ಕಾರದ ಆರ್ಥಿಕ ವ್ಯವಹಾರಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಪಡೆಯುವಂತೆ ನೂತನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ಸಲಹೆ ನೀಡಿದ್ದಾರೆ.

Advertisement

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಹುಮತ ಸಾಬೀತುಪಡಿಸಿದ ನಂತರ ಮಾತನಾಡಿದ ಸ್ಪೀಕರ್‌ ರಮೇಶ್‌
ಕುಮಾರ್‌, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ದೀರ್ಘ‌ಕಾಲ ಹಣಕಾಸು ಖಾತೆಯನ್ನು ನಿರ್ವಹಿಸಿದವರು. ಯಾವತ್ತೂ ವಿತ್ತೀಯ ಹೊಣೆಗಾರಿಕೆ ಕಾಯ್ದೆ ಮತ್ತು ಆರ್ಥಿಕ ಶಿಸ್ತು ಉಲ್ಲಂಘನೆಯಾಗದಂತೆ ನೋಡಿಕೊಂಡಿದ್ದರು.ಅವರು ಹಣಕಾಸು ಖಾತೆ ನಿರ್ವಹಿಸಿದ ಸಂದರ್ಭದಲ್ಲಿ ಯಾವತ್ತೂ ಸರ್ಕಾರದ ಒಂದು ಚೆಕ್‌ ಕೂಡ ತಿರಸ್ಕೃತಗೊಂಡಿರಲಿಲ್ಲ. ಕಲ್ಯಾಣ ಕಾರ್ಯಕ್ರಮಗಳ ಜತೆ 
ಅಭಿವೃದ್ಧಿ ಕಾರ್ಯಗಳೂ ಯಶಸ್ವಿಯಾಗುವಂತೆ ಕೆಲಸ ಮಾಡಿದ್ದರು. ಆದ್ದರಿಂದ ಆರ್ಥಿಕ ನಿರ್ವಹಣೆ ವೇಳೆ ಸಿದ್ದರಾಮಯ್ಯ ಅವರ ಅನುಭವಗಳ ಸಲಹೆ ಪಡೆಯಿರಿ ಎಂದು ರಾಜ್ಯದ ಒಬ್ಬ ಪ್ರಜೆಯಾಗಿ ನಿಮಗೆ ಸಲಹೆ ನೀಡುತ್ತಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next