Advertisement

ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗ್ಲಿ ಬಿಡಿ: ಸಿಡಿ ಪ್ರಕರಣದ ಬಗ್ಗೆ ಸಿದ್ದರಾಮಯ್ಯ

12:17 PM Mar 14, 2021 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವು ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಯುವತಿ ಬಿಡುಗಡೆ ಮಾಡಿದ ಹೊಸ ವಿಡಿಯೋ ಇದೀಗ ಸಂಚಲನ ಉಂಟು ಮಾಡಿದೆ. ಈ ಘಟನೆಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರಕ್ಷಣೆ ಕೋರಿ ಮಹಿಳೆ ವಿಡಿಯೋ ಬಿಡುಗಡೆ ಮಾಡಿರುವ ಬಗ್ಗೆ ನಾನು ನಿಮ್ಮ ಜತೆ ಮಾತನಾಡುವುದಿಲ್ಲ. ಇದರ ಬಗ್ಗೆ ಅಸೆಂಬ್ಲಿಯಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು: ನಾಳೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ನಾಯಕರಿದ್ದಾರೆ ಎನ್ನುವ ಆರೋಪದ ಬಗ್ಗೆ ಕೇಳಲಾದ ಪ್ರಶ್ನೆಗೆ ಸಿದ್ದರಾಮಯ್ಯ, “ಇದರ ಬಗ್ಗೆ ಸಹ ರಿಯಾಕ್ಟ್ ಮಾಡುವುದಿಲ್ಲ ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗ್ಲಿ ಬಿಡಿ’ ಎಂದರು.

ಶನಿವಾರ ಯುವತಿ ವಿಡಿಯೋ ಬಿಡುಗಡೆ ಮಾಡಿದ್ದು, ಅದರಲ್ಲಿ ರಮೇಶ್ ಜಾರಕಿಹೊಳಿಯವರು ಕೆಲಸ ಕೊಡಿಸುವುದಾಗಿ ನಂಬಿಸಿ ಅನ್ಯಾಯ ಮಾಡಿದ್ದಾರೆ. ವೀಡಿಯೋವನ್ನು ರಮೇಶ್ ಜಾರಕಿಹೊಳಿಯೇ ಬಿಡುಗಡೆ ಮಾಡಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾರೆ. ಅದಲ್ಲದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತನಗೆ ರಕ್ಷಣೆ ನೀಡಬೇಕು ಎಂದು ಕೋರಿದ್ದಾರೆ.

Advertisement

ಇದನ್ನೂ ಓದಿ: ಡಿಎಂಕೆ ಆಫ‌ರ್‌ ಧಮಾಕಾ : ಜನಪ್ರಿಯ ಘೋಷಣೆಗಳ ಪ್ರಣಾಳಿಕೆ ಬಿಡುಗಡೆ

Advertisement

Udayavani is now on Telegram. Click here to join our channel and stay updated with the latest news.

Next