Advertisement

ಸಿದ್ದರಾಮಯ್ಯ ಮತ್ತು ಡಿಕೆಶಿ ಕೇವಲ ಫೋಟೋ ಫ್ರೆಂಡ್ಸ್: ಶ್ರೀರಾಮುಲು ವಾಗ್ದಾಳಿ

12:34 PM Aug 29, 2021 | Team Udayavani |

ಹುಬ್ಬಳ್ಳಿ: ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಕೇವಲ ಪೋಟೋ ಫ್ರೆಂಡ್ಸ್. ದೆಹಲಿಗೆ ಹೋದಾದ ಮಾತ್ರ ಒಂದಾಗಿರುತ್ತಾರೆ. ರಾಹುಲ್, ಸೋನಿಯಾ, ಪ್ರಿಯಾಂಕ ಗಾಂಧಿ ಎದುರು ಕೈ ಕೈ ಕುಲಾಯಿಸುತ್ತಾರೆ. ಆದರೆ ಹೊರಗಡೆ ಇಬ್ಬರ ಮಧ್ಯೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ಇದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಹು-ಧಾ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದರು.

ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು?

ಹುಬ್ಬಳ್ಳಿ ತಗ್ಗು-ಗುಂಡಿಗಳ ನಗರ ಎಂಬ ಡಿಕೆಶಿ ಹೇಳಿಕೆ ವಿಚಾರವು, ಅವರು ಕನಕಪುರದಿಂದ ಬಂದವರು. ಪ್ರಹ್ಲಾದ ಜೋಶಿ, ಜಗದೀಶ ಶೆಟ್ಟರ ಅಭಿವೃದ್ಧಿ ಮಾಡಿದ್ದಾರೆ. ಕಾಂಗ್ರೆಸ್ ಹಗಲುಕನಸು ಕಾಣುತ್ತಿದ್ದಾರೆ. ಎಲ್ಲಾ ಚುನಾವಣೆಯಲ್ಲಿ ಕೈ ನಾಯಕರು ನಾವೇ ಗೆಲ್ಲುತ್ತೇವೆ ಎನ್ನುತ್ತಾರೆ. ಆದರೆ ಎಲ್ಲೂ ಗೆದ್ದಿಲ್ಲ ಎಂದರು.

ನಷ್ಟದಲ್ಲಿರುವ ಸಾರಿಗೆ ಇಲಾಖೆ ಮೇಲೆತ್ತುವ ಕೆಲಸ ಮಾಡುತ್ತೇನೆ. ಉಸ್ತುವಾರಿ ಸಚಿವರ ನೇಮಕ ಕೆಲವೊಂದು ಕಡೆ ಆಗಬೇಕು, ಅದು ಆಗುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next