Advertisement

ಸಿದ್ದರಾಮಯ್ಯ 2ನೇ ಬಾರಿಗೆ ಸಿಎಂ ಆಗಿ ಆಯ್ಕೆ; ಕೊಪ್ಪಳ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮ

06:44 PM May 18, 2023 | Team Udayavani |

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದ ಕನಕದಾಸ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

Advertisement

ಸಿದ್ದರಾಮಯ್ಯ ಎರಡನೇ ಅವಧಿಗೆ ಸಿಎಂ ಆಗಿ ಮತ್ತು ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಆಯ್ಕೆಯಾಗಿ ಉತ್ತಮ ಆಡಳಿತ ನೀಡುವ ಭರವಸೆಯೊಂದಿಗೆ ಕೈ ಅಧಿಕಾರಕ್ಕೆ ಬರುತ್ತಿರುವುದು ಹೆಮ್ಮೆ ತಂದಿದೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ‌. ಗೊಂಡಬಾಳ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ಪಕ್ಷಕ್ಕೆ ಎರಡು ಕಣ್ಣು ಇದ್ದಂತೆ. ಇಬ್ಬರೂ ಸೇರಿ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಲಿದ್ದಾರೆ. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಪಕ್ಷ ಜಯಭೇರಿ ಭಾರಿಸುವ ಮೂಲಕ ದೇಶದಲ್ಲಿ ಹೊಸ ಮನ್ವಂತರ ಸೃಷ್ಟಿಸಲಿದೆ. ಅದಕ್ಕೆ ಪಕ್ಷ ಮೊದಲು ಎಂದು ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಈಗಿನಿಂದಲೇ ಶ್ರಮವಹಿಸಿ ಕೆಲಸ ಮಾಡಬೇಕು. ಬರುವ ಸೋಮವಾರದಿಂದಲೇ ಪಕ್ಷ‌ ಸಂಘಟನೆಯ ಕೆಲಸ ಆರಂಭವಾಗುತ್ತದೆ, ವಿಶೇಷವಾಗಿ ಮಹಿಳಾ ಸಂಘಟನೆ ಬಲಿಷ್ಠಗೊಳಿಸುವ ನಿಟ್ಟಲ್ಲಿ ಕೆಲಸ ಮಾಡುವುದಾಗಿ ಇಬ್ಬರೂ ನಾಯಕರಿಗೆ ಶುಭ ಹಾರೈಸಿದರು.

ಈ ವೇಳೆ‌ ಜಿಲ್ಲಾ ಅಲ್ಪಸಂಖ್ಯಾತರ ಕಾಂಗ್ರೆಸ್ ಅಧ್ಯಕ್ಷ ಸಲೀಂ ಅಳವಂಡಿ, ಎಸ್. ಟಿ. ಘಟಕ ಅಧ್ಯಕ್ಷ ಮಂಜುನಾಥ ಗೊಂಡಬಾಳ, ಮುಖಂಡರಾದ ಕುಬೇರ ಮಜ್ಜಿಗಿ, ಹನುಮಂತಪ್ಪ ಕೌದಿ, ದ್ಯಾಮಣ್ಣ ಕರಿಗಾರ, ಸೌಭಾಗ್ಯ ಗೊರವರ್, ಅಂಬಿಕಾ ನಾಗರಾಳ, ಪದ್ಮಾವತಿ ಕಂಬಳಿ, ಶಿಲ್ಪಾ ಗುಡ್ಲಾನೂರ, ರೇಖಾ ಬಿಜಾಪೂರ, ಸಂತೋಷ ಕುರಿ, ಪರಶುರಾಮ ಅಣ್ಣಿಗೇರಿ, ಗ್ಯಾನಪ್ಪ, ವಿರುಪಾಕ್ಷಿ, ಬೆಳ್ಳೆಪ್ಪ‌ ಬೇವಿನಹಳ್ಳಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next