Advertisement

ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್ ಗಳನ್ನು ಕರೆಸಿ ಪ್ರಚಾರಕ್ಕಿಳಿದಿದ್ದಾರೆ: ಸೋಮಣ್ಣ

04:45 PM May 04, 2023 | Team Udayavani |

ಮೈಸೂರು: ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್ ಗಳನ್ನು ಕರೆಸಿ ಕೊಂಡು ಪ್ರಚಾರಕ್ಕೆ ಇಳಿದಿದ್ದಾರೆ. ಒಂದೇ ದಿನ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ಸಿದ್ದರಾಮಯ್ಯ ಈಗ ಮತ್ತೆ ಮತ್ತೆ ಬರ್ತಿದ್ದಾರೆ ಎಂದು ವರುಣ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ ರಾಜಕುಮಾರ್ ಕುಟುಂಬಕ್ಕೂ ನನಗೂ 40 ವರ್ಷದ ಅವಿನಾಭಾವ ಸಂಬಂಧವಿದೆ. ಪುನೀತ್ ರಾಜಕುಮಾರ್ ಹೆಸರಿನಲ್ಲಿ ನಮ್ಮ ಕ್ಷೇತ್ರದಲ್ಲಿ ಬೃಹತ್ ಆಸ್ಪತ್ರೆ ಕಟ್ಟಿಸಿದ್ದೇನೆ. ಶಿವರಾಜ್ ಕುಮಾರ್ ಯಾಕೆ ಹೀಂಗೆ ಮಾಡಿದರು ನನಗೆ ಗೊತ್ತಿಲ್ಲ. ನನಗೆ ವಿಜಿ, ರಮ್ಯಾ ಬಗ್ಗೆ ಗೊತ್ತಿಲ್ಲ. ಆದರೆ ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದ್ರು ಗೊತ್ತಿಲ್ಲ ಅಷ್ಟೆ ಎಂದರು.

ಸಿದ್ದರಾಮಯ್ಯ ಅವರು ಸ್ಟಾರ್ ಪ್ರಚಾರಕ್ಕೆ ಜೊತೆ ಬಂದು ಸೋಮಣ್ಣ ವಿರುದ್ದ ಪ್ರಚಾರ ಮಾಡ್ತಿದ್ದಾರಲ್ಲ ನನಗೆ ಅದೇ ಖುಷಿ. ಜನ ಸೇರಿಸಲು ಸಿದ್ದರಾಮಯ್ಯ ಸ್ಟಾರ್ ಗಳ ಜೊತೆ ಬರುತ್ತಿದ್ದಾರೆ ಅಷ್ಟೇ ಎಂದು ಹೇಳಿದರು.

ತಮ್ಮಿಂದ ಮಾತ್ರ ವರುಣ ಕ್ಷೇತ್ರದ ಅಭಿವೃದ್ಧಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸೋಮಣ್ಣ, ತಮ್ಮ ಮನೆಯ ಕೋಳಿ ಕೂಗಿದರೆ ಮಾತ್ರ ಬೆಳಕು ಹರಿಯುತ್ತದೆ ಎಂಬ ರೀತಿ ಸಿದ್ದರಾಮಯ್ಯ ಮಾತಾಡ್ತಿದ್ದಾರೆ. ಸಿದ್ದರಾಮಯ್ಯ ಅವರು ಮನಸ್ಸು ಮಾಡಿದ್ದರೆ ಐದು ವರ್ಷದಲ್ಲಿ ವರುಣ ಕ್ಷೇತ್ರಕ್ಕೆ ಚಿನ್ನದ ತಗಡನ್ನೇ ಹೊಡೆಸಬಹುದಿತ್ತು. ವರುಣದಲ್ಲಿ ಒಂದು ಕಾಲೇಜಿಲ್ಲ, ಆಸ್ಪತ್ರೆ  ಇಲ್ಲ, ರಸ್ತೆಗಳು ಸರಿ ಇಲ್ಲ. ಇದು ವರುಣ ಸ್ಥಿತಿ. ಬದಾಮಿಯಲ್ಲೂ ಸಿದ್ದರಾಮಯ್ಯ ಯಾವ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಜನರ ಋಣ ತೀರಿಸುವುದಕ್ಕೂ ಬದ್ಧತೆ ಬೇಕು. ‌ನಾನು ಆ ಕೆಲಸವನ್ನು ಮಾಡಿದ್ದೇನೆ. ನಾನು – ನಾನು ಎಂಬುದನ್ನು ಸಿದ್ದರಾಮಯ್ಯ ಅವರು ಮೊದಲು ಬಿಡಲಿ. ವರುಣ ಜನ ನನ್ನ ಗೆಲ್ಲಿಸಿದರೆ ನಾನು ವರುಣದಲ್ಲೇ ಇರ್ತಿನಿ. ವರುಣದಲ್ಲೇ ಮನೆನೂ ಮಾಡುತ್ತೇನೆ. ಶಾಶ್ವತವಾಗಿ ಇರುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next