Advertisement

ಪಂಚರಾಜ್ಯ ಫಲಿತಾಂಶ: ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿದೆ

02:26 PM Mar 10, 2022 | Team Udayavani |

ಬೆಂಗಳೂರು : ನಮ್ಮ ತಪ್ಪಿನಿಂದ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ, ಅಲ್ಲೇನು ಬಿಜೆಪಿ ಬಂದಿಲ್ಲ ಆಪ್ ಅಧಿಕಾರಕ್ಕೆ ಬಂದಿದೆ ಎಂದು ಪಂಚರಾಜ್ಯ ಫಲಿತಾಂಶದ ಕುರಿತು ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನೂ ಪೂರ್ಣಾವಾಗಿ ಫಲಿತಾಂಶ ಬಂದಿಲ್ಲ, ಇನ್ನೂ ಬರುತ್ತಿದೆ. ಪಂಜಾಬ್ ನಲ್ಲಿ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಬೇರೆ ರಾಜ್ಯಗಳಲ್ಲಿ ನಾವು ಅಧಿಕಾರದಲ್ಲಿರಲಿಲ್ಲ. ಉತ್ತರಾಖಂಡ, ಗೋವಾದಲ್ಲಿ ನಿರೀಕ್ಷೆ ಇತ್ತು ಎಂದರು.

ಈ ಚುನಾವಣೆಗಳಿಂದ ನಾನೇನು ಬಹಳ ನಿರೀಕ್ಷೆಯೇನೂ ಇರಲಿಲ್ಲ. ಆದರೆ ಗೋವಾ, ಉತ್ತರಖಂಡದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಅಂದಾಜು ಇತ್ತು. ಈ ಚುನಾವಣೆಯಿಂದ ಧೈರ್ಯ ಕಳೆದು ಕೊಳ್ಳುವಂಥದ್ದೇನಿಲ್ಲ. ಪಂಜಾಬ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದಾರಾ..? ಅಧಿಕಾರ ಇರೋ ರಾಜ್ಯಗಳಲ್ಲಿ ಗೆದ್ದಿದ್ದಾರೆ ಅಷ್ಟೆ.ಇದರಿಂದ ಬಹಳ ಜಂಬ ಪಡುವ ಅಗತ್ಯ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next