Advertisement

ಮೋದಿ- ಶಾ ಯಾತ್ರೆ ಮಾಡಿಲ್ವಾ.. ಅವರಿಗೆ ಬೇರೆ ಕಾನೂನು ಇದೆಯೇ: ಸಿದ್ದರಾಮಯ್ಯ ಪ್ರಶ್ನೆ

02:21 PM Jan 04, 2022 | Team Udayavani |

ಬೆಂಗಳೂರು: ನಾವು ರಾಜಕೀಯಕ್ಕಾಗಿ ಪಾದಯಾತ್ರೆ ಮಾಡುತ್ತಿಲ್ಲ. ಸೋಂಕು ಹರಡಂತೆ ಎಲ್ಲಾ ಮುಂಜಾಗೃತಾ ಕ್ರಮ ಕೈಗೊಂಡು ಪಾದಯಾತ್ರೆ ನಡೆಸುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಕೋವಿಡ್ ಕಾರಣದಿಂದ ಮೇಕೆದಾಟು ಪಾದಯಾತ್ರೆ ಮುಂದೂಡಬೇಕು ಎಂಬ ಸಚಿವ ಸುಧಾಕರ್ ಮನವಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, “ಕೋವಿಡ್ ನೆಪವೊಡ್ಡಿ ಪಾದಯಾತ್ರೆ ತಡೆಯುವ ಯತ್ನ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಉತ್ತರ ಪ್ರದೇಶದಲ್ಲಿ ಪಾದಯಾತ್ರೆ ಮಾಡಿಲ್ಲವೆ? ಅವರಿಗೆ ಒಂದು ಕಾನೂನು ನಮಗೆ ಒಂದು ಕಾನೂನಾ? ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ:Covid ಹೆಚ್ಚಳ:ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ, ಮನೆಯಿಂದಲೇ ಸರ್ಕಾರಿ ಸಿಬಂದಿಗಳ ಕೆಲಸ

ಸೋಂಕು ಹರಡದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿತ್ತು. ಸರ್ಕಾರ ಇದರಲ್ಲಿ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next