Advertisement

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ಧರಾಮಯ್ಯ ಆಯ್ಕೆ

08:37 PM May 18, 2018 | Karthik A |

ಹೈದ್ರಾಬಾದ್ : ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾಯಿತ ಶಾಸಕರ ತುರ್ತು ಸಭೆಯಲ್ಲಿ ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ನಾಳೆ ನಡೆಯುವ ಬಿ.ಜೆ.ಪಿ. ಸರಕಾರದ ವಿಶ್ವಾಸ ಮತ ಯಾಚನೆಯ ಸಂದರ್ಭದಲ್ಲಿ ಸದನದಲ್ಲಿ ಬಿ.ಜೆ.ಪಿ. ಯನ್ನು ಯಶಸ್ವಿಯಾಗಿ ಎದುರಿಸುವ ಉದ್ದೇಶದಿಂದ ಅನುಭವಿ ಸಿದ್ಧರಾಮಯ್ಯ ಅವರಿಗೆ ಪಕ್ಷ ಈ ಜವಾಬ್ದಾರಿ ವಹಿಸಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

Advertisement

ಚುನಾವಣಾ ಫಲಿತಾಂಶದಲ್ಲಿ ಎರಡನೇ ಆತೀ ದೊಡ್ಡ ಪಕ್ಷವಾಗಿ ಮೂಡಿಬಂದಿರುವ ಕಾಂಗ್ರೆಸ್ ಇದೀಗ ನಾಳಿನ ವಿಶ್ವಾಸಮತ ಪ್ರಕ್ರಿಯೆ ಸಂದರ್ಭದಲ್ಲಿ ಪ್ರಮುಖ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ‘ಕೈ’ ಪಾಳಯ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next