Advertisement

ರಮೇಶ್‌ ವಿರುದ್ಧ ಸಿದ್ದರಾಮಯ್ಯ ಗರಂ

12:30 AM Feb 18, 2019 | Team Udayavani |

ಬೆಂಗಳೂರು: ಅತೃಪ್ತ ಶಾಸಕರ ನಾಯಕ ರಮೇಶ್‌ ಜಾರಕಿಹೊಳಿ ಅವರನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ಶುಕ್ರವಾರ ಸಚಿವ ಜಮೀರ್‌ ಅಹಮದ್‌ ನೇತೃತ್ವದಲ್ಲಿ ಬಿ ನಾಗೇಂದ್ರ ಅವರ ಜತೆಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ, ರಮೇಶ್‌ ಜಾರಕಿಹೊಳಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್‌ ಅವರ ಹಸ್ತಕ್ಷೇಪ ಹೆಚ್ಚಾಗಿದ್ದಕ್ಕೆ ತಮಗೆ ಅಸಮಾಧಾನವಾಗಿತ್ತು ಎಂದು ರಮೇಶ್‌ ಜಾರಕಿಹೊಳಿ ಸಮಜಾಯಿಸಿ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದ್ದು, ಅದು ನಿಮ್ಮಿಬ್ಬರ ವೈಯಕ್ತಿಕ ವಿಷಯ ಅದಕ್ಕಾಗಿ ಪಕ್ಷದ ವಿರುದಟಛಿ ತಿರುಗಿ ಬೀಳುವುದು ಎಷ್ಟು ಸರಿ? ನಿಮ್ಮ ನಡವಳಿಕೆಯಿಂದ ಪಕ್ಷದಲ್ಲಿ ಎಲ್ಲರೂ ನನ್ನ ಮೇಲೆ ಸಂಶಯ ಪಡುವಂತಾಯಿತು ಎಂದು ಸಿದ್ದರಾಮಯ್ಯ ಗರಂ ಆಗಿದ್ದರು ಎಂದು ಹೇಳಲಾಗುತ್ತಿದೆ.

ಬಿಜೆಪಿಯಲ್ಲಿಯೇ ಯಡಿಯೂರಪ್ಪ ಅವರನ್ನು ಯಾರೂ ನಂಬುತ್ತಿಲ್ಲ. ನೀವು ಅವರನ್ನು ನಂಬಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದೀರ. ಸಚಿವ ಸ್ಥಾನ ನೀಡಿದ್ದರೂ, ಸಂಪುಟ ಸಭೆಗೆ ಹಾಜರಾಗದೇ ದೂರ ಉಳಿದುಕೊಂಡಿದ್ದೇಕೆ? ಬೆಳಗಾವಿಯಲ್ಲಿಯೇ ಅಧಿವೇಶನ ನಡೆದರೂ ಯಾಕೆ ಪಾಲ್ಗೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಆಗಿರುವ ತಪ್ಪು ಸರಿಪಡಿಸಿಕೊಂಡು ನಿಮ್ಮೊಂದಿಗೆ ಇರುತ್ತೇನೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕ ಸ್ಥಾನ
ಅನರ್ಹಗೊಳಿಸುವಂತೆ ಸಭಾಧ್ಯಕ್ಷ ರಮೇಶ್‌ ಕುಮಾರ್‌ ಅವರಿಗೆ ನೀಡಿರುವ ದೂರು ವಾಪಸ್‌ ಪಡೆಯುವಂತೆ ರಮೇಶ್‌ ಜಾರಕಿಹೊಳಿ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಆದರೆ, ತಕ್ಷಣಕ್ಕೆ ದೂರು ವಾಪಸ್‌ ಪಡೆಯಲು ಸಿದ್ದರಾಮಯ್ಯ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next