Advertisement

ಸಿದ್ದರಾಮಯ್ಯಗೆ ಕ್ರೇನ್ ನಿಂದ ಬೃಹತ್ ಗುಲಾಬಿ ಹಾರ; ಹೆಬ್ಬಾಳಕರ ಶಕ್ತಿ ಪ್ರದರ್ಶನ

01:40 PM Mar 01, 2023 | Team Udayavani |

ಬೆಳಗಾವಿ: ಪ್ರಜಾಧ್ವನಿ ಯಾತ್ರೆ ನಿಮಿತ್ತ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಬೈಕ್‌ ರ್ಯಾಲಿ ಆರಂಭಗೊಂಡಿದ್ದು, ಸಿದ್ದರಾಮಯ್ಯ ಅವರಿಗೆ ಬೃಹತ್ ಪ್ರಮಾಣದ ಗುಲಾಬಿ ಹಾರ ಹಾಕಿ ಸ್ವಾಗತಿಸಲಾಯಿತು. ಕ್ರೇನ್ ನಲ್ಲಿ ರಸ್ತೆಯುದ್ದಕ್ಕೂ ಹೂವಿನ ಸುರಿಮಳೆಗೈಯಲಾಯಿತು.

Advertisement

ತಾಲೂಕಿನ‌ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಗ್ರಾಮೀಣ ಶಾಸಕಿ‌ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಜಾಧ್ವನಿ ಯಾತ್ರೆ ಸಮಾವೇಶಕ್ಕೆ ಶಿಂಧೋಳ್ಳಿ ಗ್ರಾಮದಿಂದ ಬೈಕ್ ರ್ಯಾಲಿ ಮೂಲಕ ಸಮಾವೇಶ ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಕ್ರೇನ್ ಮೂಲಕ 25 ಅಡಿ ಉದ್ದದ ಗುಲಾಬಿ ಹಾರ ಹಾಕಿ ಸ್ವಾಗತಿಸಲಾಯಿತು.

ಇದನ್ನೂ ಓದಿ:ಸಿದ್ದರಾಮಯ್ಯ ಅವರೇ ನಾನು ನಿಮ್ಮಿಂದ ಆಡಳಿತ ಕಲಿಯಬೇಕಾಗಿಲ್ಲ: ಹೆಚ್‌ ಡಿಕೆ

ಡೊಳ್ಳು ಸೇರದಂತೆ ವಿವಿಧ ವಾದ್ಯ ಮೇಳದೊಂದಿಗೆ ಸಿದ್ದರಾಮಯ್ಯ ಸಮಾವೇಶಕ್ಕೆ ‌ಆಗಮಿಸಿದರು. ಅಪಾರ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳು ಸೇರಿದ್ದವು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕ ಜಮೀರ‌ ಅಹ್ಮದ್, ಪ್ರಕಾಶ ರಾಠೋಡ, ವಿನಯ ನಾವಲಗಟ್ಟಿ, ‌ಲಕ್ಷ್ಮಣರಾವ ಚಿಂಗಳೆ, ಹಿರೇಬಾಗೇವಾಡಿಯ ಪೀರ ಅಜ್ಜ, ಅಶೋಕ‌ ಪಟ್ಟಣ, ಶಂಕರಗೌಡ ಪಾಟೀಲ‌ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next