Advertisement

ಡಿಕೆಶಿಗೆ ಬೆಳಗಿನ‌ ಉಪಹಾರಕ್ಕೆ ಆಹ್ವಾನಿಸಿದ ಸಿದ್ದರಾಮಯ್ಯ! ಏನಿದು ಸಿದ್ದರಾಮ ತಂತ್ರ?

10:32 AM Jul 08, 2022 | Team Udayavani |

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘಟಕದಲ್ಲಿ‌‌ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿರುವುದರ ಮಧ್ಯೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಉಪಹಾರ ಕೂಟಕ್ಕೆ ಆಹ್ವಾನಿಸಿರುವುದು ಈಗ ತೀವ್ರ ಕುತೂಹಲ ಸೃಷ್ಟಿಸಿದೆ.

Advertisement

ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಇರುವ ತಮ್ಮ ನಿವಾಸಕ್ಕೆ ಉಪಹಾರ ಸೇವೆಸಲು ಬರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ಮಾಡಿ ಆಹ್ವಾನಿಸಿದ ಹಿನ್ನೆಲೆಯಲ್ಲಿ ಶಿವಕುಮಾರ್ ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಅಲ್ಲಿಗೆ ತೆರಳಿದ್ದಾರೆ. ಆದರೆ ಈ ಸಂದರ್ಭದಲ್ಲಿ ಯಾವ ಚರ್ಚೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ.

ಇದನ್ನೂ ಓದಿ:ಇಂದಿನ ಅಗತ್ಯಕ್ಕೆ ತಕ್ಕಂತೆ ಎನ್‌ಇಪಿ : ವಾರಾಣಸಿಯ ಸಮ್ಮೇಳನದಲ್ಲಿ ಪ್ರಧಾನಿ ಮಾತು

ಸಿದ್ದರಾಮೋತ್ಸವವನ್ನು ಪಕ್ಷದ ಕಾರ್ಯಕ್ರಮ ಎಂದೇ ಪರಿಗಣಿಸಿ ಎಂದು ಶಿವಕುಮಾರ್ ನೀಡಿರುವ ಹೇಳಿಕೆ ಸಿದ್ದರಾಮಯ್ಯ ಬಣಕ್ಕೆ ಮಾಸ್ಟರ್ ಸ್ಟ್ರೋಕ್ ಆಗಿ‌ದೆ. ಶಕ್ತಿ ಪ್ರದರ್ಶನಕ್ಕೆ ಹೊರಟ ಸಿದ್ದರಾಮಯ್ಯ ಜತೆ ಪೈಪೋಟಿಗೆ ಇಳಿಯುವ ಬದಲು‌ ನಾವು ನಿಮ್ಮ ಜತೆ ಇದ್ದೇವೆ ಎಂಬಂತೆ ಶಿವಕುಮಾರ್ ವರ್ತಿಸಿದ್ದಾರೆ‌.‌ಹೀಗಾಗಿ ಡಿಕೆಶಿ ಜತೆ ಅಂತರ ಕಾಯ್ದುಕೊಳ್ಳುವ ಬದಲು ಸಿದ್ದರಾಮಯ್ಯ ಅವರಿಗೆ ಅನಿವಾರ್ಯವಾಗಿ ಪರಿಣಮಿಸಿದೆ. ಹೀಗಾಗಿ ಅವರ ಜತೆ ಸೌಹಾರ್ದತೆ ಕಾಪಾಡಲು ಮುಂದಾಗಿರುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next