Advertisement

ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಸದಾನಂದಗೌಡ

09:34 AM Nov 23, 2019 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್‌ ದಯನೀಯ ಸ್ಥಿತಿಗೆ ತಲುಪಿದರೂ ಸಿದ್ದರಾಮಯ್ಯ ಅವರಿಗೆ ಬುದ್ದಿ ಬಂದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ಧಾಳಿ ನಡೆಸಿದರು.

Advertisement

ಮಹಾಲಕ್ಷ್ಮೀ ಲೇಔಟ್‌ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಪರವಾಗಿ ಶುಕ್ರವಾರ ಪ್ರಚಾರ ನಡೆಸುವ ವೇಳೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಅವರು ಅಧಿಕಾರದಲ್ಲಿದ್ದಾಗಲೇ ಬಿಜೆಪಿ 25 ಲೋಕಸಭಾ ಸ್ಥಾನ ಗೆದ್ದಿದೆ. ಆದರೆ 25 ಸ್ಥಾನ ಗೆದ್ದಿದ್ದು, ವಾಮ ಮಾರ್ಗದಿಂದಲೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನ ಯಾರೊಬ್ಬ ಹಿರಿಯ ನಾಯಕರು ಸಿದ್ದರಾಮಯ್ಯ ಅವರೊಂದಿಗಿಲ್ಲ. ಮಾಜಿ ಸಚಿವರಾದ ಡಾ.ಜಿ.ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಎಲ್ಲರದ್ದೂ ಒಂದೊಂದು ಹಾದಿ. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆರ್ಯವರಂತೂ ಪ್ರಚಾರದಲ್ಲೆಲ್ಲೂ ಕಾಣಿಸುತ್ತಿಲ್ಲ. ವಾಮಮಾರ್ಗದಿಂದ ಚುನಾವಣೆ ಎದುರಿಸುವ ಗತಿ ಬಿಜೆಪಿಗೆ ಇಲ್ಲ ಎಂದು ತಿರುಗೇಟು ನೀಡಿದರು.

ಜೆಡಿಎಸ್‌ ವಿರುದ್ಧವೂ ಹರಿಹಾಯ್ದ ಸದಾನಂದಗೌಡ, ಜೆಡಿಎಸ್‌ನ ತಾರಾ ಪ್ರಚಾರಕರ ಪಟ್ಟಿ ನೋಡಿದರೆ ನಗು ಬರುತ್ತದೆ. ಪಟ್ಟಿಯಲ್ಲಿರೋ 12 ತಾರಾ ಪ್ರಚಾರಕರಲ್ಲಿ 8 ಮಂದಿ ಕುಟುಂಬದವರೇ ಇದ್ದಾರೆ. ದೇವೇಗೌಡ ಆ್ಯಂಡ್‌ ಕಂಪೆನಿಯಲ್ಲಿ 12 ಮಂದಿ ತಾರಾ ಪ್ರಚಾರಕರಿದ್ದಾರೆ. ಅಥಣಿ ಹಾಗೂ ಹಿರೇಕೆರೂರು ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಬಲವಂತವಾಗಿ ಹಿಂದಕ್ಕೆ ಸರಿಸಿಲ್ಲ. ಒಂದು ಪಕ್ಷದ ಟಿಕೆಟ್‌ ಪಡೆದು ಸ್ಪರ್ಧಿಸಿದವರಿಂದ ನಾಮಪತ್ರ ವಾಪಸ್‌ ಪಡೆಯೋಕೆ ಅವರೇನು ಚಿಕ್ಕ ಮಕ್ಕಳಾ ಎಂದು ಪ್ರಶ್ನಿಸಿದರು.

ಈ ಹಿಂದೆ ರಾಮನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಚಂದ್ರಶೇಖರ್‌ನನ್ನು ಕಣದಿಂದ ಹಿಂದೆ ಸರಿಸಿದವರು ಯಾರು. ಈ ರೀತಿಯ ಕೆಲಸಗಳನ್ನು ಬಿಜೆಪಿ ಮಾಡುವುದಿಲ್ಲ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next