Advertisement

ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ;ಬಿಎಸ್‌ವೈ 

12:46 PM Oct 24, 2018 | |

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಕಿಡಿ ಕಾರಿದ್ದು, ಶ್ರೀರಾಮುಲು ಅವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ  ಸಿದ್ದರಾಮಯ್ಯ ಅವರು ಪ್ರಚಾರದ ಭರಾಟೆಯಲ್ಲಿ  ಶ್ರೀರಾಮುಲು ಸೆಕ್ಷನ್‌ 420 ಅರ್ಥ ಮಾಡಿಕೊಂಡಿದ್ದಾರೆ ಎಂದು ನಾಲಿಗೆ ಹರಿಯ ಬಿಟ್ಟಿದ್ದಾರೆ. ಇದು ಅವರ ಘನತೆಗೆ ತಕ್ಕುದಲ್ಲ ಎಂದರು.

ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಿದ್ದು ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. 

ಪ್ರಧಾನಿ ಅಭ್ಯರ್ಥಿ ಯಾರು?
ಪ್ರಧಾನಿ ಅಭ್ಯರ್ಥಿ ಯಾರು ಎನ್ನುವ ಗೊಂದಲ ಕಾಂಗ್ರೆಸ್‌ನಲ್ಲಿದೆ.ಕೆಲವರು ರಾಹುಲ್‌ ಗಾಂಧಿ ಅಂದರೆ ಇನ್ನು ಕೆಲವರು ಚಿದಂಬರಂ ಅನ್ನುತ್ತಿದ್ದಾರೆ. ಆದರೆ ಎಲ್ಲಾ ಸಮೀಕ್ಷೆಗಳು ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿವೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next