Advertisement

ಗಲಭೆಕೋರರ ಬೆಂಬಲಿಸುವ ಸಿದ್ದರಾಮಯ್ಯ ದೇಶದ್ರೋಹಿ: ಈಶ್ವರಪ್ಪ

11:34 PM Aug 16, 2022 | Team Udayavani |

ಭದ್ರಾವತಿ: ಶಿವಮೊಗ್ಗ ಜಿಲ್ಲೆಯಲ್ಲಿ ಗಲಭೆಕೋರರು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್‌ ಭಾವಚಿತ್ರ ಕಿತ್ತೆಸೆದು ಪ್ರೇಮ್‌ ಸಿಂಗ್‌ ಮೇಲೆ ನಡೆಸಿರುವ ಘಟನೆಯನ್ನು ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ಖಂಡಿಸದೆ ಗೂಂಡಾ ಸಂಸ್ಕೃತಿಯವರನ್ನು ಬೆಂಬಲಿಸುವ ರೀತಿ ಹೇಳಿಕೆ ನೀಡಿದ್ದಾರೆ. ಇದರಿಂದ ಸಿದ್ದರಾಮಯ್ಯ ದೇಶದ್ರೋಹಿ ಎನ್ನುವುದು ಸಾಬೀತಾಗಿದೆ ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಮಂಗಳವಾರ ನಗರದ ನೆಹರೂ ನಗರ ಬಡಾವಣೆಯಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗ ದಳ ಕಾರ್ಯಕರ್ತ ಸುನೀಲ್‌ ಅವರನ್ನು ಭೇಟಿ ಮಾಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾರ್ವಕರ್‌ ಭಾವಚಿತ್ರವನ್ನು ಸರ್ಕಲ್‌ನಲ್ಲಿ ಹಾಕಿದ ಕಾರಣಕ್ಕೆ ಅದನ್ನು ಕಿತ್ತಸೆದಿರುವ ಹಾಗೂ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಗಲಭೆಕೋರರನ್ನು ನಮ್ಮ ಸರಕಾರ ಸಹಿಸಲು ಸಾಧ್ಯವಿಲ್ಲ.

ಮುಸ್ಲಿಂ ಸಮುದಾಯದ ಹಿರಿಯರು ಅವರ ಯುವಕರಿಗೆ ಬುದ್ಧಿ ಹೇಳಿ ತಿದ್ದುವ ಕೆಲಸ ಮಾಡದಿದ್ದರೆ ಇದರ ಪರಿಣಾಮ ಅವರು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next