Advertisement

ಡಿಕೆಶಿ, ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ

01:55 AM Apr 06, 2019 | Team Udayavani |

ಪಾಂಡವಪುರ ತಾಲೂಕಿನ ವಿವಿಧೆಡೆ ಪ್ರಚಾರ ನಡೆಸಿದ ನಿಖೀಲ್‌ ಕುಮಾರಸ್ವಾಮಿ, “ರಾಜಕೀಯವಾಗಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಶಕ್ತಿ ತುಂಬಿರುವ ಮಂಡ್ಯ ಜಿಲ್ಲೆಯಲ್ಲೇ ನನ್ನ ರಾಜಕೀಯ ಜೀವನಕ್ಕೂ ಮುನ್ನುಡಿ ಬರೆಯಲು ಒಂದು ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

Advertisement

ಈ ಮಧ್ಯೆ, ಮಂಡ್ಯ ಗಾಂಧಿನಗರದಲ್ಲಿರುವ ಜಾಮಿಯಾ ಮಸೀದಿಗೆ ಭೇಟಿ ನೀಡಿ, ಮುಸ್ಲಿಂ ಟೋಪಿ ಧರಿಸಿ ಮುಸಲ್ಮಾನರೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿ,”ಶುಕ್ರವಾರ ಮುಸ್ಲಿಮರಿಗೆ ಪವಿತ್ರ ದಿನ. ಹಾಗಾಗಿ ಮಸೀದಿಗೆ ಬಂದೆ. ಏ.8ರಿಂದ ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಪ್ರಚಾರ ನಡೆಸಲಿದ್ದಾರೆ. ಸಿದ್ದರಾಮಯ್ಯ ಸೇರಿ ಅನೇಕರು ಸಹ ಪ್ರಚಾರಕ್ಕೆ ಆಗಮಿಸಲಿದ್ದಾರೆ’ ಎಂದು ಹೇಳಿದರು.

ಇದೇ ವೇಳೆ, “ಕುಮಾರಸ್ವಾಮಿ ಮಗನಿಗೆ ನನ್ನ ಓಟು’ ಎಂದು ಅಜ್ಜಿಯೊಬ್ಬಳು ಹೇಳಿರುವ 49 ಸೆಕೆಂಡ್‌ಗಳ ವಿಡಿಯೋ ಇದೀಗ ವೈರಲ್‌ ಆಗಿದೆ. ಜಿ.ವಿ.ಶ್ರೀನಿವಾಸ್‌ ಎಂಬುವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ವಿಡಿಯೋ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಸುಮಲತಾ ಬೆಂಬಲಿಗರು, ಎಲೆಕ್ಷನ್‌ ಮುಗಿಯುವವರೆಗೆ ಆರೋಗ್ಯ ನೋಡಿಕೊಳ್ಳಿ ಎಂದು ಕಾಮೆಂಟ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next