Advertisement

ಬ್ರಹ್ಮ ಬಂದರೂ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ; ಕೆಎಸ್ ಈಶ್ವರಪ್ಪ

10:20 AM Oct 29, 2018 | Sharanya Alva |

ಬಾಗಲಕೋಟೆ: ದೇವೇಗೌಡರ ಬೆನ್ನಿಗೆ ಸಿದ್ದರಾಮಯ್ಯ ಚಾಕು ಹಿಡಿದುಕೊಂಡು ನಿಂತಿದ್ದಾರೆ. ಸಿದ್ದರಾಮಯ್ಯ ಬೆನ್ನಿಗೆ ಕುಮಾರಸ್ವಾಮಿ ಚಾಕು ಹಿಡಿದುಕೊಂಡಿದ್ದಾರೆ. ಹೀಗಾಗಿ ಬ್ರಹ್ಮ ಬಂದರೂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲ್ಲ ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

Advertisement

ಸೋಮವಾರ ಬಾಗಲಕೋಟೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಮುಳುಗಿ ಹೋಗುವ ಹಡಗು. ಈಗ ಒಬ್ಬರನ್ನೊಬ್ಬರು ಬಾಚ್ಕೊಂಡು ತಬ್ಬಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಮೈತ್ರಿ ಸರ್ಕಾರ ಬಿದ್ದು ಹೋಗಿ, ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ತಾನು ಮತ್ತೆ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯನವರು ಹಗಲು ಕನಸು ಕಾಣುತ್ತಿದ್ದಾರೆ. ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದರು, ಬಳಿಕ ಮೊನ್ನೆ ಚಾಮುಂಡೇಶ್ವರಿ ಚುನಾವಣೆಯಲ್ಲಿ ಸಿದ್ದರಾಮಯ್ಯನವರನ್ನು ಪರಮೇಶ್ವರ್ ಸೋಲಿಸಿದರು. ಹೀಗೆ ಕಾಂಗ್ರೆಸ್ ಪಕ್ಷದೊಳಗೆ ಕಚ್ಚಾಟವಿದ್ದು, ಇವರು ಇನ್ನು ಅಧಿಕಾರಕ್ಕೆ ಬರುವುದಿಲ್ಲ. ಮೈಸೂರಿನಲ್ಲಿ ರಾಹು, ಶನಿ ರೂಪದಲ್ಲಿ ಕಾಡಿದ್ದು ದೇವೇಗೌಡರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next