Advertisement

ಸೋನಿಯಾ ಗಾಂಧಿ ಮೆಚ್ಚಿಸಲು ಸಿದ್ದರಾಮಯ್ಯ ಸಾರ್ವಕರ್ ಬಗ್ಗೆ ಮಾತಾನಾಡುತ್ತಿದ್ದಾರೆ

12:07 PM Oct 20, 2019 | Suhan S |

ಶಿವಮೊಗ್ಗ : ವೀರ ಸಾವರ್ಕರ್ ಗೆ ಭಾರತರತ್ನ ನೀಡುವ ವಿಚಾರದಲ್ಲಿ ಸಾವರ್ಕರ್ ಹೆಸರು ನಾಲಿಗೆಯಲ್ಲಿ ತರಲು ಸಿದ್ದರಾಮಯ್ಯನಿಗೆ ಯೋಗ್ಯತೆಯಿಲ್ಲ.  ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಲು ಸಾವರ್ಕರ್ ಬಗ್ಗೆ ಮಾತಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರ ,ಬ್ರಿಟಿಷರು ಸಾಗರದಾಚೆಗಿನ ಜೈಲಿನಲ್ಲಿ ಸಾವರ್ಕರ್ ಅವರನ್ನು ಇಟ್ಟಿದ್ದರು. ಸಿದ್ದರಾಮಯ್ಯ ಒಮ್ಮೆ ಹೋಗಿ ಆ ಜೈಲನ್ನು ನೋಡಿಕೊಂಡು ಬರಲಿ. ಇಂದು ಬೇರೆ ಬೇರೆ ಕಾರಣಕ್ಕೆ ಕಾಂಗ್ರೇಸ್ಸಿಗರು ಜೈಲಿಗೆ ಹೋಗುತ್ತಿದ್ದಾರೆ. ಸಾವರ್ಕರ್ ಇದ್ದ ಜೈಲು ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಕೊಟ್ಟ ಜಾಗ ಎಂದು ಹೇಳಿದರು.

ಗಾಂಧೀಜಿ ಶಾಂತಿಯುತವಾಗಿ ಹೋರಾಟ ಮಾಡಿದ್ರೇ, ಸಾವರ್ಕರ್, ಭಗತ್, ಚಂದ್ರಶೇಖರ್ ಕ್ರಾಂತಿ ಮಾರ್ಗದಲ್ಲಿ ಹೋರಾಟ ಮಾಡಿದ್ರು, ಇತಿಹಾಸ ಗೊತ್ತಿರದ ಸಿದ್ದರಾಮಯ್ಯ ಹುಚ್ಚು ಹುಚ್ಚಾಗಿ ಮಾತನಾಡುತ್ತಾರೆ ಎಂದ ಈಶ್ವರಪ್ಪ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಭಾರತರತ್ನ ಯಾರಿಗೆ ಕೊಡ್ಬೇಕು ಎಂದು ಯೋಚನೆ ಮಾಡುತ್ತದೆ. ಇಂದಲ್ಲಾ- ನಾಳೆ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಸಿಗುತ್ತದೆ  ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next