Advertisement

ಸಿದ್ದರಾಮಯ್ಯ ಸುಳ್ಳುಗಳ ಸರದಾರ: ಆರೋಪ

11:15 AM Nov 11, 2017 | |

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿಗೆ ಸೆಳೆಯಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ಹೇರಲಾಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ನಿರಾಧಾರ ಮತ್ತು ಸುಳ್ಳು ಎಂದು ಆದಾಯ ತೆರಿಗೆ ಇಲಾಖೆಯೇ ಸ್ಪಷ್ಟನೆ ನೀಡಿರುವುದರಿಂದ ಸಿದ್ದರಾಮಯ್ಯ ಅವರು ಸುಳ್ಳುಗಳ ಸರದಾರ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಶಾಸಕ ಎಸ್‌.ಸುರೇಶ್‌ಕುಮಾರ್‌ ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ. 

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಹೇಳಿಕೆಗೆ ಆದಾಯ ತೆರಿಗೆ ಇಲಾಖೆ ನೀಡಿರುವ ಸ್ಪಷ್ಟೀಕರಣದಿಂದಾಗಿ ರಾಜ್ಯದ ಕಾಂಗ್ರೆಸ್‌ ಸರ್ಕಾರಕ್ಕೆ ಮಂಗಳಾರತಿಯಾಗಿದೆ. “ರಾಜ ಬೆತ್ತಲಾಗಿದ್ದಾನೆ’ ಎಂಬ ಮಾತು ಈ ಪ್ರಕರಣದಲ್ಲಿ  ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಅನ್ವಯವಾಗು  ತ್ತಿದ್ದು, ಅವರು ಜನರ ಮುಂದೆ ಸಂಪೂರ್ಣ ಬೆತ್ತಲಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿ ಸದಾ ಅಪ್ರಸ್ತುತ ವಿಷಯಗಳ ಮೇಲೆಯೇ ಅವಲಂಬಿತರಾಗಿದ್ದಾರೆ. ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಹಸಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ. ಈ ಸರ್ಕಾರದ ಕಾರ್ಯ ವೈಖರಿ ಮತ್ತು ಮನೋಬಾವದ ಬಗ್ಗೆ ಬಿಜೆಪಿ ಮಾಡುತ್ತಿದ್ದ ಪ್ರತಿಪಾದನೆ ಈಗ ಸತ್ಯವಾಗಿದೆ ಎಂದು ಹೇಳಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next