Advertisement

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಏಕಾಂಗಿ: ಶೆಟ್ಟರ್‌

09:52 AM Nov 28, 2019 | Team Udayavani |

ರಾಣಿಬೆನ್ನೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಏಕಾಂಗಿಯಾಗಿದ್ದಾರೆ. ಈ ಉಪ ಚುನಾವಣೆಯಲ್ಲಿ ಅವರೊಬ್ಬರೆ ಮುಂಚೂಣಿಯಲ್ಲಿದ್ದಾರೆ. ಉಳಿದ ನಾಯಕರು ಅವರನ್ನು ಬೆಂಬಲಿಸುತ್ತಿಲ್ಲ. ಕಾಟಾಚಾರಕ್ಕೆ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ವ್ಯಂಗ್ಯವಾಡಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ಯಾತ್ಯತೀತ ಜನತಾ ದಳದಿಂದ ವಲಸೆ ಬಂದು ಕಾಂಗ್ರೆಸ್‌ನಲ್ಲಿ ಬೇರೂರಿರುವ ಸಿದ್ದರಾಮಯ್ಯರಿಗೆ ವಲಸೆ ಮತ್ತು ಮೂಲ ಕಾಂಗ್ರೆಸಿಗರ ಸಮಸ್ಯೆ ಎದುರಾಗಿದೆ. ಸಿದ್ದರಾಮಯ್ಯ ಕೈಗೊಳ್ಳುತ್ತಿರುವ ನಿರ್ಣಯಗಳು ಮೂಲ ಕಾಂಗ್ರೆಸಿಗರಿಗೆ ಕಸಿವಿಸಿಯನ್ನುಂಟು ಮಾಡುತ್ತಿವೆ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಾಣಲಿದೆ ಎಂದು ಗೊತ್ತಾಗಿ ಸಿದ್ದರಾಮಯ್ಯ ಹತಾಶೆಗೊಂಡಿದ್ದಾರೆ. ಕೀಳುಮಟ್ಟದ ರಾಜಕಾರಣ ಮಾಡುವ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಎಚ್ಚರಿಕೆ ನೀಡುವ ಮೂಲಕ ವಿಪಕ್ಷ ನಾಯಕನ ಸ್ಥಾನ ಸಹ ಕಸಿದುಕೊಳ್ಳಲಿದೆ. ಆಗ ಸಿದ್ದರಾಮಯ್ಯ ಪರಿಸ್ಥಿತಿ ಇನ್ನಷ್ಟು ಜಟಿಲಗೊಳ್ಳಲಿದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಸಿಗಲಿವೆ ಎಂದು ಸಿದ್ದರಾಮಯ್ಯ ಭ್ರಮಾಲೋಕದಲ್ಲಿ ಇದ್ದಾರೆ. ಎಲ್ಲ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿ ಸಲಿದೆ ಎಂದು ಶೆಟ್ಟರ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next