Advertisement

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

11:14 PM Sep 13, 2024 | Team Udayavani |

ಬೆಂಗಳೂರು: ಮುಡಾ ಪ್ರಕರಣದಲ್ಲಿ ಕಾನೂನು ಕುಣಿಕೆಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ, ಸಿಎಂ ಸ್ಥಾನದ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸಿದ ಕಾಂಗ್ರೆಸ್‌ ನಾಯಕರ ಜತೆಗೆ ಶುಕ್ರವಾರ ಉಪಾಹಾರ ಕೂಟ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Advertisement

2 ದಿನಗಳ ಹಿಂದೆ ನಿಗದಿಯಾಗಿದ್ದ ಈ ಸಭೆ ಹೈಕೋರ್ಟ್‌ ವಿಚಾರಣೆ ಹಿನ್ನೆಲೆಯಲ್ಲಿ ಮುಂದೂಡಿಕೆ ಯಾಗಿತ್ತು. ಸಿಎಂ ಆಕಾಂಕ್ಷಿಗಳಾದ ಆರ್‌.ವಿ. ದೇಶಪಾಂಡೆ, ಡಾ| ಜಿ.ಪರಮೇಶ್ವರ್‌, ಸತೀಶ್‌ ಜಾರಕಿ ಹೊಳಿ, ಬಸವರಾಜ ರಾಯರೆಡ್ಡಿ ಹಾಗೂ ಎಂ.ಬಿ. ಪಾಟೀಲ್‌ ಜತೆಗೆ ತಮ್ಮ ಅಧಿಕೃತ ನಿವಾಸದಲ್ಲಿ ಸಿದ್ದರಾಮಯ್ಯ ಶುಕ್ರವಾರ ಉಪಾಹಾರದ ಜತೆಗೆ ಚರ್ಚೆ ನಡೆಸಿದರು.

ನೀವೆಲ್ಲರೂ ಬಹಿರಂಗವಾಗಿ ಈ ಹೇಳಿಕೆ ನೀಡಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಬೇರೆಯದೇ ಆದ ಸಂದೇಶ ರವಾನೆಯಾಗುತ್ತಿದೆ. ಎಲ್ಲರೂ ವಿಪಕ್ಷದ ಟೀಕೆಗೆ ಆಹಾರವಾಗಬೇಕಾಗಿದೆ. ನಾಯಕತ್ವದ ಬಗ್ಗೆ ಜನಸಾಮಾನ್ಯರಲ್ಲಿ ಪ್ರಶ್ನೆಗಳು ಮೂಡುತ್ತಿದ್ದು, ಅನಗತ್ಯ ಗೊಂದಲ ಸೃಷ್ಟಿಯಾಗಿದೆ. ಇನ್ನು ಮುಂದೆ ಇಂಥಹ ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಭೆಗೆ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಡಿ.ಕೆ. ಶಿವಕುಮಾರ್‌ ಅವರಿಗೆ ಆಹ್ವಾನವಿರಲಿಲ್ಲ. ಅಮೆರಿಕ ಪ್ರವಾಸದಲ್ಲಿರುವ ಅವರ ನಡೆಯ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾವವಾಗಿದೆ. ವಿಶೇಷವಾಗಿ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಿರುವುದು ಉಳಿದ ಸಿಎಂ ಆಕಾಂಕ್ಷಿಗಳ ಹುಬ್ಬು ಗಂಟಿಕ್ಕುವಿಕೆಗೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next