Advertisement

ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

10:47 PM Sep 19, 2022 | Team Udayavani |

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Advertisement

ಸೋಮವಾರ ಅಧಿವೇಶನ ಮುಗಿದ ಬಳಿಕ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ಅವರು ಗೌಡರ ಜತೆ ಸ್ವಲ್ಪ ಹೊತ್ತು ಮಾತನಾಡಿದರು.

ಮಾಜಿ ಸಚಿವರಾದ ಆರ್‌.ವಿ. ದೇಶಪಾಂಡೆ, ಜಮೀರ್‌ ಅಹಮದ್‌, ಶಾಸಕ ಬೈರತಿ ಸುರೇಶ್‌ ಅವರು ಜತೆಯಲ್ಲಿದ್ದರು.

ಮಾಜಿ ಪ್ರಧಾನಿ ದೇವೇಗೌಡರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ.
ಬಹಳ ದಿನಗಳ ನಂತರ ದೇವೇಗೌಡರನ್ನು ಭೇಟಿಯಾದದ್ದು ಸಂತೋಷವಾಯಿತು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next