Advertisement

ಡಿ ಕೆ ಶಿವಕುಮಾರ್ ಭೇಟಿಯಾದ ಸಿದ್ದರಾಮಯ್ಯ: ಹೇಳಿದ್ದೇನು

09:57 AM Oct 28, 2019 | keerthan |

ಬೆಂಗಳೂರು: 51 ದಿನಗಳ ನ್ಯಾಯಾಂಗ ಬಂಧನದ ನಂತರ ಶನಿವಾರ ಬೆಂಗಳೂರಿಗೆ ಆಗಮಿಸಿದ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿಯಾದರು.

Advertisement

ರವಿವಾರ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. “ನಾನು ಡಿಕೆಶಿ ಭೇಟಿಗೆ ದೆಹಲಿಗೆ ಹೋಗಿದ್ದೆ.  ಆದರೆ ಇಡಿಯವರು ಭೇಟಿಗೆ ಅವಕಾಶ ಕೊಡಲಿಲ್ಲ. ಹಾಗಾಗಿ ಇವತ್ತು ಬಂದು ಭೇಟಿ ಮಾಡಿದ್ದೇನೆ ಎಂದರು.

ಡಿ ಕೆ ಶಿವಕುಮಾರ್ ಅವರು ಧೈರ್ಯ ಕಳೆದುಕೊಂಡಿಲ್ಲ. ಈಗ ಡಿಕೆಶಿ ಆರೋಗ್ಯ ಸುಧಾರಿಸಿದೆ. ಮಧ್ಯೆ ಬಿಪಿ ಏರುಪೇರಾಗಿತ್ತು ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸಿದ್ದರಾಮಯ್ಯ,  ನಾವು ಇವತ್ತು ರಾಜಕೀಯವಾಗಿ ಯಾವುದೇ ಚರ್ಚೆ ಮಾಡಲಿಲ್ಲ. ಡಿಕೆಶಿಗೆ ಯಾವ ಸ್ಥಾನ ಕೊಡಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next