Advertisement

ಸಿದ್ದರಾಮಯ್ಯ ಪ್ರಮಾಣವಚನ: ಇಂದಿರಾ ಕ್ಯಾಂಟಿನ್ ಗಳಲ್ಲಿ ಜನರಿಗೆ ಹೋಳಿಗೆ ವಿತರಣೆ

04:54 PM May 20, 2023 | Team Udayavani |

ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶನಿವಾರ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ದಕ್ಷಿಣ ಕನ್ನಡ, ಬಾಗಲಕೋಟೆ ಜಿಲ್ಲೆಯ ಇಂದಿರಾ ಕ್ಯಾಂಟಿನ್​‌ ಗಳಲ್ಲಿ ಜನರಿಗೆ ಹೋಳಿಗೆ ವಿತರಣೆ ಮಾಡಲಾಯಿತು.

Advertisement

ಡಾ. ಮಯೂರ ಮೋರೆ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿರುವ ಒಂಭತ್ತು ಇಂದಿರಾ ಕ್ಯಾಂಟಿನ್​ ಗಳಲ್ಲಿ ಜನರಿಗೆ ಊಟದ ಜೊತೆಗೆ ಹೋಳಿಗೆ ಹಾಗೂ ಕೆಲವೆಡೆ ಸಕ್ಕರೆ ಪಾಕ, ತುಪ್ಪ ವಿತರಣೆ ಮಾಡಲಾಯಿತು.

ಹುಬ್ಬಳ್ಳಿ-ಧಾರವಾಡ, ದಕ್ಷಿಣ ಕನ್ನಡ, ಬಾಗಲಕೋಟೆ ಸೇರಿ ಮೂರು ಜಿಲ್ಲೆಗಳ 17 ಕ್ಯಾಂಟಿನ್​ ಗಳಲ್ಲಿ ಒಟ್ಟು 5 ಸಾವಿರ ಹೋಳಿಗೆ ವಿತರಣೆ ಮಾಡಲಾಗಿದೆ ಎಂದು ಇಂದಿರಾ ಕ್ಯಾಂಟೀನ್ ಉಸ್ತುವಾರಿ ಪ್ರಕಾಶ ತಡಸ ತಿಳಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬೀದರ್​ನಿಂದ ಚಾಮರಾಜನಗರದವರೆಗೂ ಅವರ ಅಭಿಮಾನಿಗಳ ಅಪೇಕ್ಷೆ ಮೇರೆಗೆ ಕಳೆದ ಎರಡ್ಮೂರು ದಿನಗಳಿಂದ ಇಂದಿರಾ ಕ್ಯಾಂಟೀನ್ ಗಳಲ್ಲಿ ಹೋಳಿಗೆ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next