Advertisement

ತಮ್ಮ ಪಕ್ಷದವರಿಂದಲೇ ಆರೋಪ ಕೇಳಿದ ಯಡಿಯೂರಪ್ಪ ರಾಜೀನಾಮೆ ಕೊಡಬೇಕು : ಸಿದ್ದರಾಮಯ್ಯ

05:59 PM Apr 02, 2021 | Team Udayavani |

ದಾವಣಗೆರೆ : ಭ್ರಷ್ಟಾಚಾರವೇ ವ್ಯಾಪಕವಾಗಿರುವ ರಾಜ್ಯದಲ್ಲಿಆಡಳಿತ ಯಂತ್ರ ಕುಸಿದಿದೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲಾ ರಾಜ್ಯಪಾಲರು ತಕ್ಷಣ ರಾಷ್ಟ್ರಪತಿ ಆಳ್ವಿಕೆಗೆ ಜಾರಿಗೆ ಶಿಫಾರಸ್ಸು ನೀಡಬೇಕೆಂದು ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸರ್ಕಾರದಲ್ಲಿಒಬ್ಬರ ಮೇಲೆ ಒಬ್ಬರಿಗೆ ನಂಬಿಕೆಯಿಲ್ಲ. ಇದಕ್ಕೆ ಈಶ್ವರಪ್ಪ ಪತ್ರ ಬರೆದಿರುವುದು ಸಾಕ್ಷಿ. ಪರಸ್ಪರ ಹೊಂದಾಣಿಕೆ, ನಂಬಿಕೆಯಿಲ್ಲದ ಸರ್ಕಾರದಿಂದ ಆಡಳಿತ ವ್ಯವಸ್ಥೆ ಕುಸಿದಿದೆ. ಈ ಕಾರಣಕ್ಕೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರಬೇಕು ಎಂದು ಹೇಳಿದರು.

ಸ್ವಪಕ್ಷೀಯರಿಂದಲೇ ಆರೋಪ ಕೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಕೊಡಬೇಕು. ಸಿಡಿ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸದ್ಯ ಸಿಡಿ ಪ್ರಕರಣ ತನಿಖೆ ಆಗುತ್ತಿದೆ. ತನಿಖೆಯ ಬಳಿಕವೇ ಸತ್ಯಾಂಶ ಹೊರ ಬರುತ್ತದೆ. ಅಲ್ಲಿಯವರೆಗೆ ಕಾದು ನೋಡುವ ಎಂದರು.

 

ಇದನ್ನೂ ಓದಿ : ಹಳಿ ತಪ್ಪಿ ರೈಲು ಅಪಘಾತ : 48 ಪ್ರಯಾಣಿಕರ ದುರ್ಮರಣ

Advertisement

 

Advertisement

Udayavani is now on Telegram. Click here to join our channel and stay updated with the latest news.

Next