Advertisement

Siddaramaiah; ನಿಗಮ ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ಸ್ಥಾನ

11:41 PM Dec 31, 2023 | Team Udayavani |

ಬೆಂಗಳೂರು: ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡುವಂತೆ ಪಕ್ಷದ ವರಿಷ್ಠರಿಂದ ಸೂಚನೆ ಬಂದಿದೆ. ಈಗ ಕಾರ್ಯಕರ್ತರ ಪಟ್ಟಿ ತಯಾರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ನಿಗಮ ಮಂಡಳಿ ಹಾಗೂ ಲೋಕಸಭೆ ಚುನಾವಣೆ ಸಂಬಂಧ ವಿವರವಾಗಿ ಚರ್ಚಿಸಲು ದಿಲ್ಲಿಗೆ ಬರುವಂತೆ ವರಿಷ್ಠರು ಸೂಚಿಸಿದ್ದಾರೆ ಎಂದರು.

Advertisement

ನಾನೂ ರಾಮಭಜನೆ ಮಾಡಿದ್ದೇನೆ
ರಾಮಮಂದಿರ ನಿರ್ಮಾಣದ ಕೆಲಸ ಸಂತೋಷ ವನ್ನುಂಟು ಮಾಡಿದೆ. ನಾವು ಎಂದಿಗೂ ರಾಮಮಂದಿರ ವಿರುದ್ಧ ಇಲ್ಲ. ಪರವಾಗಿಯೇ ಇದ್ದೇವೆ. ನಾನು ಕೂಡ ಹಳ್ಳಿಯಲ್ಲಿ ಹಿಂದೆ ರಾಮಭಜನೆ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಸಂಸದ ಪ್ರತಾಪ ಸಿಂಹ ಅವರ ಸೋದರ ವಿಕ್ರಂ ಸಿಂಹ ತಪ್ಪು ಮಾಡದಿದ್ದರೆ ಯಾಕೆ ಶಿಕ್ಷೆ ಆಗುತ್ತದೆ? ತಪ್ಪು ಮಾಡದವರ ಮೇಲೆ ಯಾಕೆ ಕ್ರಮ ಆಗುತ್ತದೆ? ಈ ಪ್ರಕರಣದಲ್ಲಿ ಸರಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

 

Advertisement

Udayavani is now on Telegram. Click here to join our channel and stay updated with the latest news.

Next