Advertisement

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

09:21 PM Jan 26, 2022 | Team Udayavani |

ಬೆಂಗಳೂರು: ಕಾಂಗ್ರೆಸ್‌ಗೆ ಬರಲು ಇಚ್ಛಿಸಿರುವ ಶಾಸಕರು -ಸಚಿವರ ಬಳಿ ನಾನು ನಾನಾಗಿಯೇ ಮಾತನಾಡುವುದಿಲ್ಲ. ಅವರಾಗಿ ಬಂದರೆ ಮಾತನಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿ, ಹೌದು ಹೇಳಿದ್ದೆ.ಆ ಮಾತಿಗೆ ಈಗಲೂ ಬದ್ಧ. ಅವರನ್ನು ಸೇರಿಸಿಕೊಳ್ಳುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್‌ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತವಿದೆ. ಯಾವುದೇ ಷರತ್ತು ಇಲ್ಲದೆ ಬಂದರೆ ಸೇರಿಸಿಕೊಳ್ಳಲಾಗುವುದು ಎಂದು ಹೇಳಿದರು.

ಹತ್ತು ಕಡೆ ಆಹ್ವಾನ ಇದೆ
ಇದೇ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದುಕೊಂಡಿದ್ದೇನೆ. ಬಾದಾಮಿ, ವರುಣಾ ಸೇರಿ ಹತ್ತು ಕ್ಷೇತ್ರಗಳಿಂದ ಸ್ಪರ್ಧೆಗೆ ಆಹ್ವಾನ ಇದೆ. ಎಲ್ಲಿ ಸ್ಪರ್ಧೆ ಮಾಡಬೇಕು ಎಂದು ತೀರ್ಮಾನಿಸಿಲ್ಲ. ಹೈಕಮಾಂಡ್‌ ಹೇಳಿದ ಕಡೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.

ಕೊಪ್ಪಳ, ಕೋಲಾರ, ಹೆಬ್ಟಾಳ, ವರುಣ, ಚಾಮರಾಜಪೇಟೆ, ಬಾದಾಮಿ, ಚಾಮುಂಡೇಶ್ವರಿ ಸೇರಿ ಹತ್ತು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಒತ್ತಡ ಬಂದಿದೆ ಎಂದು ತಿಳಿಸಿದರು.

Advertisement

ಇದನ್ನೂ ಓದಿ:ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರಶ್ನಿಸಿದಾಗ, ನಾನು ಅವರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ನೋ.. ನೋ.. ಎಂದು ನಿರ್ಗಮಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next