Advertisement

Siddaramaiah ಆಯ್ಕೆ ‘ಅಸಿಂಧು’ ಅರ್ಜಿ: 31ಕ್ಕೆ ವಿಚಾರಣೆ ಮುಂದಕ್ಕೆ

07:50 PM Aug 09, 2024 | Team Udayavani |

ಬೆಂಗಳೂರು: ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮವೆಸಗಿ ವಿಧಾನಸಭಾ ಚುನಾಣೆಯಲ್ಲಿ ವರುಣಾ ಕ್ಷೇತ್ರದಿಂದ ಗೆದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಆ.31ಕ್ಕೆ ಮುಂದೂಡಿತು.

Advertisement

ಈ ವಿಚಾರವಾಗಿ ವರುಣಾ ಹೋಬಳಿಯ ಕೂಡನಹಳ್ಳಿ ಕೆ.ಎಂ.ಶಂಕರ್‌ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸಿ, ಕೆಲವೊಂದು ದಾಖಲೆಗಳನ್ನು ಮಂಡಿಸಬೇಕಿದ್ದು ಕಾಲಾವಕಾಶ ಬೇಕೆಂದು ಮನವಿ ಮಾಡಿದರು. ಇದಕ್ಕೆ ಸಿದ್ದರಾಮಯ್ಯ ಪರ ವಕೀಲೆ ಲೀಲಾ ದೇವಾಡಿಗ ಸಹಮತಿಸಿದ್ದರಿಂದ ಆಗಸ್ಟ್‌ 31ಕ್ಕೆ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next