Advertisement

ಸಿದ್ದು ಕ್ಷಮೆಯಾಚಿಸದಿದ್ದರೆ ಹಕ್ಕುಚ್ಯುತಿ ಮಂಡನೆ; ಬಿಎಸ್ ವೈ, ಮಂಡಿಸಲಿ ಬಿಡಿ; ಸಿದ್ದು

09:52 AM Oct 27, 2019 | Nagendra Trasi |

ಹುಬ್ಬಳ್ಳಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಏಕವಚನದಲ್ಲಿ ಮಾತನಾಡಿರುವ ಸಿದ್ದರಾಮಯ್ಯನವರು ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

Advertisement

ಶನಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ಪೀಕರ್ ವಿರುದ್ಧ ಹಗುರವಾಗಿ ಮಾತನಾಡಿರುವ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸದನದಲ್ಲಿ ಹಕ್ಕುಚ್ಯುತಿ ಮಂಡಿಸುವುದಾಗಿ ತಿಳಿಸಿದ್ದರು.

ಹಕ್ಕುಚ್ಯುತಿ ಮಂಡಿಸಲಿ ಬಿಡಿ…ನಾನು ಕ್ಷಮೆ ಕೇಳಲ್ಲ; ಸಿದ್ದರಾಮಯ್ಯ

ನನಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ. ವಿಪಕ್ಷ ನಾಯಕನಿಗೆ ಹೀಗೆ ಮಾತನಾಡಲು ಅವಕಾಶ ನೀಡದಿರುವ ಇತಿಹಾಸವೇ ಇಲ್ಲ. ಹೀಗಾಗಿ ನಾನು ಸ್ಪೀಕರ್ ವಿರುದ್ಧ ಮಾತನಾಡಿದ್ದೇನೆ. ನಾನು ತಪ್ಪೇ ಮಾಡಿಲ್ಲ ಎಂದ ಮೇಲೆ ಕ್ಷಮೆ ಯಾಕೆ ಕೇಳಲಿ. ಹಕ್ಕು ಚ್ಯುತಿ ಮಂಡಿಸಲಿ ಬಿಡಿ. ನಾನು ಯಡಿಯೂರಪ್ಪರಿಂದ ಪಾಠ ಕಲಿಯಬೇಕಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next