Advertisement

ಸಿದ್ಧರಾಮಯ್ಯ ಶುದ್ಧ ಹಸ್ತರಾಗಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಬ್ರಿಜೇಶ್ ಚೌಟ

04:21 PM Aug 19, 2024 | Team Udayavani |

ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುದ್ಧ ಹಸ್ತರು, ಭ್ರಷ್ಟಾಚಾರ ರಹಿತ ವ್ಯಕ್ತಿಯಾಗಿದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ.

Advertisement

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತನಿಖೆಯಲ್ಲಿ ಆರೋಪ ಮುಕ್ತರಾಗಿ ಬಂದು ಮತ್ತೆ ಸಿಎಂ ಆಗಲಿ. ಅದು ಬಿಟ್ಟು ಹಾದಿ ಬೀದಿಯಲ್ಲಿ ನಿಂತು ಸಂವಿಧಾನಾತ್ಮಕ ಹುದ್ದೆಯಾಗಿರುವ ರಾಜ್ಯಪಾಲರ ವಿರುದ್ಧ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ಶಾಸಕರಾದ ಡಾ| ವೈ.ಭರತ್ ಶೆಟ್ಟಿ ಮತ್ತು ಡಿ. ವೇದವ್ಯಾಸ ಕಾಮತ್ ಅವರು ಮಾತನಾಡಿ, ಕಾಂಗ್ರೆಸ್ ಪ್ರತಿಭಟನೆಯ ವೇಳೆ ಮಂಗಳೂರಿನಲ್ಲಿ ಬಸ್ಸುಗಳಿಗೆ ಕಲ್ಲು ಎಸೆಯುವ ಮೂಲಕ ಸಾರ್ವಜನಿಕ ಸೊತ್ತಿಗೆ ಹಾನಿ ಮಾಡಲಾಗಿದ್ದು, ಪೊಲೀಸ್ ಆಯುಕ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲರ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು. ‘ಬಾಂಗ್ಲಾ ಪ್ರಧಾನಿ ಮಾದರಿಯಲ್ಲಿ ರಾಜ್ಯಪಾಲರು ರಾತ್ರೋತಾತ್ರಿ ರಾಜ್ಯ ಬಿಟ್ಟು ಓಡಿ ಹೋಗುವ ಪರಿಸ್ಥಿತಿ ಬರಬಹುದು’ ಎಂದು ಹೇಳಿ ನೀಡಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರನ್ನು ಪೊಲೀಸರು ತಕ್ಷಣ ಬಂಧಿಸಿ ಪ್ರಕರಣ ದಾಖಲಿಸಬೇಕು ಎಂದರು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next