Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು, ಈಗ ಪ್ರಧಾನಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ ಎಂದು ಟೀಕಿಸಿದ್ದಾರೆ.
Related Articles
Advertisement
ಔಷಧಿ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿಗಳನ್ನು ಕಂಡಾಗ ಕನಿಕರ ಮೂಡುತ್ತಿದೆ. 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಲಸಿಕೆ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿಯವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಮಹಿಳೆಯರು ಋತುಚಕ್ರದ ಐದು ದಿನಗಳ ಮೊದಲು ಮತ್ತು ನಂತರ ಕೋವಿಡ್ ಲಸಿಕೆ ಪಡೆಯಬಹುದೆ?