Advertisement

ರೆಡ್ಡಿ ಪಕ್ಷಕ್ಕೆ ಭವಿಷ್ಯವಿಲ್ಲ: ಸಿದ್ದು

11:04 PM Jan 04, 2023 | Team Udayavani |

ಹಗರಿಬೊಮ್ಮಹಳ್ಳಿ: ಹೊಸ ಪಕ್ಷ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ. ಆದರೆ ಜನಾರ್ದನ ರೆಡ್ಡಿ ಹೊಸ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ದೇವರಾಜು ಅರಸು, ಬಂಗಾರಪ್ಪ, ಯಡಿಯೂರಪ್ಪ, ಶ್ರೀರಾಮುಲು ಎಲ್ಲರೂ ಹೊಸ ಪಾರ್ಟಿ ಕಟ್ಟಿದ್ದಾರೆ. ಆದರೆ ಪ್ರಾದೇಶಿಕ ಪಕ್ಷಗಳಿಗೆ ರಾಜ್ಯದಲ್ಲಿ ಭವಿಷ್ಯ ಇಲ್ಲ. ಬಿಜೆಪಿ, ಜೆಡಿಎಸ್‌ ಏನಾದರೂ ಹೇಳಿಕೊಳ್ಳಲಿ, ಯಾರೇ ಹೊಸ ಪಕ್ಷ ಮಾಡಲಿ, ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಪರ ಜನರ ಒಲವು ಇದ್ದು, 2023ರ ಚುನಾವಣೆಯಲ್ಲಿ ನೂರಕ್ಕೆ ನೂರು ನಾವು ಅ ಧಿಕಾರಕ್ಕೆ ಬರುತ್ತೇವೆ. ಜನವರಿ ಅಂತ್ಯಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next