Advertisement

ಕೇಂದ್ರ ಸರ್ಕಾರ ಒಂದು ಸಮುದಾಯ ಟಾರ್ಗೆಟ್ ಮಾಡಿ ಕಾನೂನು ರೂಪಿಸುತ್ತಿದೆ: ಸಿದ್ದರಾಮಯ್ಯ

10:09 AM Jan 27, 2020 | keerthan |

ಬೆಂಗಳೂರು: ಹಲವರ ಪ್ರಾಣ ತ್ಯಾಗದಿಂದ ಸ್ವತಂತ್ರ ಸಿಕ್ಕಿದೆ. ನಮ್ಮ ಸಂವಿಧಾನ ಶ್ರೇಷ್ಠ ಸಂವಿಧಾನ. ಆದರೆ ಸಂವಿಧಾನದ ಮೇಲೆ ಬಿಜೆಪಿ ಅವರಿಗೆ ನಂಬಿಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶ ಅಪಾಯದಲ್ಲಿದೆ. ನಾವು ಸಂವಿಧಾನ ರಕ್ಷಣೆ ಮಾಡುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಒಂದು ಸಮುದಾಯ ಟಾರ್ಗೆಟ್ ಮಾಡಿ ಕಾನೂನು ರೂಪಿಸುತ್ತಿದೆ. ಸಂವಿಧಾನದ ಪ್ರಕಾರ ಎಲ್ಲರೂ ಸಮಾನರು. ಸಂವಿಧಾನ ಉಳಿಸುವ ಪ್ರತಿಜ್ಞೆ ನಾವೆಲ್ಲರೂ ಮಾಡಿದ್ದೇವೆ ಎಂದರು.

ಸೋತವರಿಗೆ ಸಚಿವ ಸ್ಥಾನ ಇಲ್ಲ ಅಂದ ಬಿ ಎಸ್ ಯಡಿಯೂರಪ್ಪ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷ ದ್ರೋಹಿಗಳಿಗೆ ಸರಿಯಾದ ಪಾಠ ಆಗಿದೆ.  ಇದೇ ರೀತಿ ಆಗಬೇಕು ನಂಬಿದವರನ್ನು ದ್ರೋಹ ಮಾಡಿದವರಿಗೆ ಇದೇ ಶಿಕ್ಷೆ ಆಗಬೇಕು ಎಂದು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next