Advertisement

ಅಸಮತೋಲನ ಸಂಪುಟ ಅಸಮಾಧಾನಕ್ಕೆ ಕಾರಣವಾಗುತ್ತದೆ: ಸಿದ್ದರಾಮಯ್ಯ

10:01 AM Feb 09, 2020 | keerthan |

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸ್ವಾತಂತ್ರ್ಯವಿಲ್ಲ. ರಾಜ್ಯದ ಸಚಿವ ಸಂಪುಟ ಅಸಮತೋಲನದಿಂದ ಕೂಡಿದೆ. ಇದು ಸರ್ಕಾರದಲ್ಲಿ ಅಸಮಾಧಾನಕ್ಕೆ ಕಾರಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿಯಾಗಿದ್ದಾರೆ.‌ 13 ಜಿಲ್ಲೆಗಳಿಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಕ್ಕಿಲ್ಲ.‌ ಸಂಪುಟದಲ್ಲಿ ಸಾಮಾಜಿಕ ನ್ಯಾಯವೂ ಇಲ್ಲ ಎಂದು ಟೀಕಿಸಿದರು.

ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬವಾಗಿದೆ. ಅಧ್ಯಕ್ಷರ ನೇಮಕದಲ್ಲಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ.‌ ನಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಗೆ ತಿಳಿಸಿದ್ದೇವೆ. ಆಯ್ಕೆ ದಿನಾಂಕವನ್ನು ನಾವು ನಿಗದಿ ಮಾಡುವುದಕ್ಕೆ ಆಗುವುದಿಲ್ಲ. ಅಧ್ಯಕ್ಷರ ನೇಮಕ ಹೈಕಮಾಂಡ್ ಗೆ ಬಿಟ್ಟಿದ್ದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next