Advertisement

ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಇನ್ನೂ ಹೊಂದಾಣಿಕೆ ಆಗಿಲ್ಲ: ಸಿದ್ಧರಾಮಯ್ಯ

09:38 AM Nov 13, 2019 | keerthan |

ವಿಜಯಪುರ: ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕೈ ಜೋಡಿಸುವ ಕುರಿತು ಕಾಂಗ್ರೆಸ್ ಇನ್ನೂ ನಿರ್ಧಾರ ಆಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

Advertisement

ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಲ್ಲ, 12 ಸ್ಥಾನ ಗೆಲ್ಲುವುದಾಗಿ ಹೇಳಿದ್ದೇನೆ. ಆದರೆ ದೇವೇಗೌಡರು ಯಾಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ ಎಂದರು.

ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿರುವ ಶಂಕೆ ಇದೆ. ಈ‌ ಹಿಂದೆ ಸಮ್ಮಿಶ್ರ ಸರ್ಕಾರ ರಚಿಸುವಾಗ ಖರ್ಗೆಗೆ ಸಿಎಂ ಸ್ಥಾನ ನೀಡಲು ತಾವು ವಿರೋಧಿಸಿಲ್ಲ. ದೇವೇಗೌಡರು ಯಾಕೆ ಹಾಗೆ ಹೇಳುತ್ತಿದ್ದಾರೋ ಏನೋ ಗೊತ್ತಿಲ್ಲ. ಸಮ್ಮಿಶ್ರ ಸರ್ಕಾರ ಒಪ್ಪಂದ ಮಾಡುವಾಗ ನಾನು ಆ ಸಭೆಯಲ್ಲಿ ಇರಲಿಲ್ಲ. ಹೈಕಮಾಂಡ್ ಸೂಚನೆ ಹಿನ್ನೆಲೆ ನಾನು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಜೊತೆ ಸರ್ಕಾರ ರಚನೆಗೆ ಒಪ್ಪಿದ್ದೆ‌ ಎಂದರು.

ಉಪಚುನಾವಣೆ ವಿಚಾರದಲ್ಲಿ ಉಹಾಪೋಹ ಪತ್ರಿಕೋದ್ಯಮ ಹೆಚ್ಚಾಗಿದೆ. ಈಗಾಗಲೇ ಕೆಲವು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪಟ್ಟಿ ಮಾಡಿದ್ದು, ಬಾಕಿ 7 ಕ್ಷೇತ್ರಗಳಿಗೆ ಶೀಘ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದರು.

ಸಚಿವ ಸಿ ಟಿ ರವಿ ಅವರ ಹೇಳಿಕೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾವು ಆಪರೇಶನ್ ಹಸ್ತ ಮಾಡಲ್ಲ. ಸಚಿವ ಸಿ.ಟಿ. ರವಿ ಮೊದಲು ಬಿಜೆಪಿ ಬಿಟ್ಟು ಬರುವವರನ್ನು ತಡೆಯಲಿ.  ಬಿಜೆಪಿ ಬಳಿ ದುಡ್ಡಿದೆ, ಹೀಗಾಗಿ ಅನೈತಿಕ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಭೆಯಲ್ಲಿ ಯಾವುದೇ ಮುಖಂಡರೊಂದಿಗೆ ಮನಸ್ತಾಪ ಉಂಟಾಗಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next