Advertisement

ಶಾಂತಿಯುತ ಪ್ರತಿಭಟನಾಕಾರರ ಮೇಲೆ ಗೋಲಿಬಾರ್ ಮಾಡಲಾಗಿದೆ: ಸಿದ್ದರಾಮಯ್ಯ

09:59 AM Dec 21, 2019 | keerthan |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗೋಲಿಬಾರ್ ಮಾಡಲಾಗಿದೆ. ಇದು ಅಮಾನವೀಯ ಘಟನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇದು ಉದ್ದೇಶಪೂರ್ವಕ ಕೃತ್ಯ. ಭಯ ದರ್ಪದ ವಾತಾವರಣದ ಸೃಷ್ಠಿಗಾಗಿ ಇದನ್ನು ಮಾಡಲಾಗಿದೆ.  ಧರ್ಮಗಳ ನಡುವೆ ಸಂಘರ್ಷ ಉಂಟುಮಾಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಪೊಲೀಸರು ಇಬ್ಬರು ಅಮಾಯಕರನ್ನು ಕೊಂದಿರುವುದನ್ನು ಖಂಡಿಸುತ್ತೇನೆ. ಇದರ ಜವಾಬ್ದಾರಿಯನ್ನು ಸರಕಾರ ಹೊರಬೇಕು. ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಹೇಳಿದರು.

ರಾಜ್ಯದ ಎಲ್ಲಿಯೂ ನಿಷೇಧಾಜ್ಞೆ ಉಲ್ಲಂಘನೆಗೆ ಕಾಂಗ್ರೆಸ್ ಪಕ್ಷ ಕರೆ ನೀಡಿಲ್ಲ. ಈ ಕೃತ್ಯದ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಇದ್ದಾರೆ. ಬಿಎಸ್ ಯಡಿಯೂರಪ್ಪ  ಸರಕಾರದ ಮೂಲಕ ಅವರಿಬ್ಬರೂ ಮಾಡಿಸುತ್ತಿದ್ದಾರೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next