Advertisement

ಯಡಿಯೂರಪ್ಪಗೆ ವಯಸ್ಸಾಗಿದೆ ಅರುಳು ಮರುಳಾಗಿರಬಹುದೇನೋ… : ಸಿದ್ದರಾಮಯ್ಯ ತಿರುಗೇಟು

07:51 AM Oct 12, 2022 | Team Udayavani |

ಚಿತ್ರದುರ್ಗ : ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ ಎಂದು ಚಿತ್ರದುರ್ಗದ ಚಳ್ಳೇಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Advertisement

ಸಿದ್ದರಾಮಯ್ಯ ಪ್ರಧಾನಿ ಮೋದಿ ಪಾದದ ಧೂಳೀಗೂ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ, ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗತ್ತಾ? ಪ್ರೈಮ್‌ಮಿನಿಸ್ಟರ್ ಅವರು, ಹಾಗಂತ ಯಡಿಯೂರಪ್ಪ ರಾಹುಲ್ ಗಾಂಧಿ ಪಾದಕ್ಕೂ ಸಮಾನ ಅಲ್ಲ ಅಂತ ನಾನು ಹೇಳಲ್ಲ, ಅದು ಕೀಳು ಅಭಿರುಚಿಯಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಸಿಎಂ ಆದವರು ಆ ತರಹ ಎಲ್ಲ ಮಾತನಾಡಬಾರದು, ಯಡಿಯೂರಪ್ಪ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದು ಮಾತನಾಡ್ತಾರೆ ಅಂತ ಅಂದುಕೊಂಡಿರಲಿಲ್ಲ, ಯಡಿಯೂರಪ್ಪಗೆ ವಯಸ್ಸಾಗಿದೆ ಅರುಳು ಮರುಳಾಗಿರಬಹುದೇನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : 2025ರ ಒಳಗಾಗಿ ರೈಲ್ವೇ ಇಲಾಖೆಯಿಂದ ಪೂರ್ಣ ಪ್ರಮಾಣದಲ್ಲಿ ಇವಿ ಬಳಕೆಗೆ ಗುರಿ

Advertisement

Udayavani is now on Telegram. Click here to join our channel and stay updated with the latest news.

Next