Advertisement

ಇದು ಗೆದ್ದು ಬೀಗುವ ಸಮಯ ಅಲ್ಲ: ಸಿದ್ದರಾಮಯ್ಯ

02:21 PM Dec 11, 2018 | Team Udayavani |

ಹೊಸದಿಲ್ಲಿ: ಪಂಚರಾಜ್ಯ ಫ‌ಲಿತಾಂಶದ ಕುರಿತಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ಟಾಂಗ್‌ ನೀಡಿದ್ದು,ಸ್ವಪಕ್ಷಕ್ಕೂ  ಗೆದ್ದು ಬೀಗುವ ಕಾಲ ಇದಲ್ಲ ಎಂದು  ಟ್ವೀಟ್‌ ಮಾಡಿದ್ದಾರೆ. 

Advertisement

ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ.ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ.ಇದು ಗೆದ್ದು ಬೀಗುವ ಸಮಯ ಅಲ್ಲ.ಸೈದ್ಧಾಂತಿಕವಾಗಿ ಗಟ್ಟಿಗೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಗಬೇಕಾದ ಕಾಲ ಎಂದು ಬರೆದಿದ್ದಾರೆ. 

ಪಂಚರಾಜ್ಯಗಳ ಫ‌ಲಿತಾಂಶದಲ್ಲಿ ಛತ್ತೀಸ್‌ಗಢದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದ್ದು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಹಿನ್ನಡೆ ಅನುಭವಿಸಿದ್ದು ಅಧಿಕಾರಕ್ಕೇರುವ ಕಷ್ಟ ಸಾಧ್ಯಗಳು ಎದುರಾಗಿವೆ. ತೆಲಂಗಾಣ ಮತ್ತು ಮಿಜೋರಾಂನಲ್ಲಿ ಬೆರಳೆಣಿಕೆಯ ಸ್ಥಾನಗಳನ್ನು ಮಾತ್ರ ಗೆದ್ದಿದೆ. 

Advertisement

Udayavani is now on Telegram. Click here to join our channel and stay updated with the latest news.

Next