Advertisement

ಬಿಹಾರಕ್ಕೆ ಮಿಡಿಯುವ ಮೋದಿ ಎದೆ ಕರ್ನಾಟಕಕ್ಕೆ ಯಾಕೆ ಮಿಡಿಯುವುದಿಲ್ಲ?

09:15 AM Oct 03, 2019 | keerthan |

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಹಾರ ಪ್ರವಾಹದ ಕುರಿತಾಗಿ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯೆ ನಿಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಹಾರಕ್ಕೆ ಮಿಡಿದ ನಿಮ್ಮ 52 ಇಂಚಿನ ಎದೆ ಕರ್ನಾಟಕಕ್ಕೆ ಯಾಕೆ ಮಿಡಿಯುದಿಲ್ಲ ಎಂದಿದ್ದಾರೆ.

Advertisement

ಪ್ರವಾಹ ಪರಿಸ್ಥಿತಿ ಕುರಿತಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಳಿ ಮಾತನಾಡಿದ್ದೇನೆ. ಕೇಂದ್ರ ಸರಕಾರ  ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಿಹಾರ ಪ್ರವಾಹದ ಬಗ್ಗೆ ಮಿಡಿದ ನರೇಂದ್ರ ಮೋದಿಯವರ 52 ಇಂಚಿನ ಎದೆ, ಕರ್ನಾಟಕದಲ್ಲಿ ನೆರೆ ಸಂತ್ರಸ್ತರ ಬಗ್ಗೆ ಕಲ್ಲುಬಂಡೆ ಆಗಿದ್ದು ಯಾಕೆ? ಇದು 25 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ ಕರ್ನಾಟಕದ ಬಗ್ಗೆ ತಾತ್ಸಾರವೇ ಅಥವಾ ಬಿ ಎಸ್ ಯಡಿಯೂರಪ್ಪ ಅವರ ಬಗ್ಗೆ ದ್ವೇಷವೇ? ಎಂದು ಪ್ರಶ್ನಿಸಿದ್ದಾರೆ. ಇದರೊಂದಿಗೆ ನಮೋ ಮಿಸ್ಸಿಂಗ್ ಎಂದು ಸೇರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next