Advertisement

ಮಹಿಳಾಪರ ಬಜೆಟ್ ಎನ್ನುವುದು ಬಾಯಿಮಾತಿಗಷ್ಟೇ ಸೀಮಿತವೇ?: ಸಿದ್ದರಾಮಯ್ಯ

12:43 PM May 12, 2021 | Team Udayavani |

ಬೆಂಗಳೂರು: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ರಾಜ್ಯ ಸರ್ಕಾರ ಮುಚ್ಚಲು ಹೊರಟಿದ್ದು, ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳ ಮಹಿಳಾಪರ ಬಜೆಟ್ ಎಂಬುದು ಬರಿ ಬಾಯಿಮಾತಿಗಷ್ಟೇ ಸೀಮಿತವೇ? ನಾಡಿನ ಮಹಿಳೆಯರ ಮೇಲೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೈಜ ಕಾಳಜಿ ಇದ್ದರೆ ಕೂಡಲೇ 71 ಕೇಂದ್ರಗಳು ಕಾರ್ಯನಿರ್ವಹಿಸಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪರಿಹಾರ ನಿಧಿಗೆ 5 ಕೋಟಿ ರೂ., 1 ಲಕ್ಷ N-95 ಮಾಸ್ಕ್ ನೀಡಿದ ಅಪೆಕ್ಸ್ ಬ್ಯಾಂಕ್

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಮೂಲಕ ಅವರ ಬಾಳಲ್ಲಿ ಭರವಸೆ ಮೂಡಿಸುತ್ತಿದ್ದ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರದ ಮಹಿಳಾ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next